2:02 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಬೀದಿ ವ್ಯಾಪಾರಿಗಳ ಮೇಲೆ ಪಾಲಿಕೆ ಬಿಜೆಪಿ ಆಡಳಿತ ಕಾರ್ಯಾಚರಣೆ: ಸಿಪಿಎಂ ಖಂಡನೆ

01/08/2024, 18:20

ಮಂಗಳೂರು(reporterkarnataka.com):ನಗರದ ರಸ್ತೆಬದಿಗಳಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡಿ ಜೀವನ ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳ ಮೇಲೆ ಟೈಗರ್ ಕಾರ್ಯಾಚರಣೆಯ ಹೆಸರಿನಲ್ಲಿ ಅವರ ಅಂಗಡಿಗಳನ್ನು ದ್ವಂಸಗೊಳಿಸಿದ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತ ನೀತಿಯನ್ನು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿ ಖಂಡಿಸಿದೆ.
ಮಂಗಳೂರು ನಗರದೆಲ್ಲೆಡೆ ಸಣ್ಣಪುಟ್ಟ ಗೂಡಂಗಡಿಗಳಲ್ಲಿ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ಒಂದು ನೋಟೀಸು ಜಾರಿಗೊಳಿಸದೆ ಕನಿಷ್ಟ ಮುನ್ಸೂಚನೆಯೂ ನೀಡದೆ ಏಕಾಏಕಿ ಅಮಾಯಕರ ಸಣ್ಣಪುಟ್ಟ ಅಂಗಡಿಗಳನ್ನು ಕಾರ್ಯಾಚರಣೆಯ ಹೆಸರಲ್ಲಿ ಧ್ವಂಸಗೊಳಿಸಿರುವ ಪಾಲಿಕೆ ಬಿಜೆಪಿ ಆಡಳಿತ ಬಡವರ ವಿರೋಧಿಯಾಗಿ ವರ್ತಿಸಿದೆ. ಬಡವರು ನಡೆಸುವ ವ್ಯಾಪಾರ ವಹಿವಾಟಿನಿಂದ ನಗರದ ರಸ್ತೆಗಳಿಗೆ ಅಡಚಣೆಯುಂಟಾಗುವುದಾದರೆ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ಮಣ್ಣಗುಡ್ಡ ಮುಖ್ಯರಸ್ತೆಯಲ್ಲೇ ನಡೆದ ಫುಡ್ ಫೆಸ್ಟ್ ಆಹಾರ ಮೇಳದಿಂದ ಅಡಚಣೆಯುಂಟಾಗಲಿಲ್ಲವೇ ಎಂದು ಪಾಲಿಕೆ ಆಡಳಿತ ಉತ್ತರಿಸಬೇಕು. ಪಾಲಿಕೆ ವ್ಯಾಪ್ತಿಯ ಸುತ್ತಮುತ್ತ ರಾಜಾರೋಷವಾಗಿ ನಡೆಯುವ ಜೂಜುಕೇಂದ್ರಗಳು, ಇಸ್ಪೀಟ್ ಕ್ಲಬ್ ಗಳನ್ನು ತೆರವುಗೊಳಿಸಲು, ನಗರದ ರಸ್ತೆಗಳನ್ನೇ ಕಬಳಿಸಿ ಅಕ್ರಮವಾಗಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣಗಳ ಮೇಲೆ ಯಾವೊಂದು ಕ್ರಮಕೈಗೊಳ್ಳಲು ಈವರೆಗೂ ಪಾಲಿಕೆ ಆಡಳಿತ ಮುಂದಾಗಿಲ್ಲ. ಅದೇ ಸಣ್ಣಪುಟ್ಟ ವ್ಯಾಪಾರಿಗಳು ರಸ್ತೆಬದಿ ನಡೆಸುವ ವ್ಯಾಪಾರಗಳನ್ನು ತೆರವುಗೊಳಿಸಲು ಪೊಲೀಸರ ಮೂಲಕ ಬಲಪ್ರಯೋಗದಿಂದ ತೆರವುಗೊಳಿಸುತ್ತಿರುವ ಕಾರ್ಯಾಚರಣೆ ಬಡವರ ಬಗೆಗೆ ಬಿಜೆಪಿಗಿರುವ ಕಾಳಜಿಯನ್ನು ಬಯಲುಗೊಳಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಆಡಳಿತ ಈ ಕೂಡಲೇ ಟೈಗರ್ ಕಾರ್ಯಾಚರಣೆಯನ್ನು ನಿಲ್ಲಿಸಬೇಕು. ಅಂಗಡಿ ಧ್ವಂಸಗೊಳಿಸಿ ವಶಪಡಿಸಿಕೊಂಡಿರುವ ಬೀದಿಬದಿ ವ್ಯಾಪಾರಿಗಳ ಸೊತ್ತುಗಳನ್ನು ಕೂಡಲೇ ಹಿಂತಿರುಗಿಸಬೇಕು. ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲು ಕ್ರಮಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ಬೀದಿ ವ್ಯಾಪಾರಿಗಳು ನಡೆಸುವ ಹೋರಾಟಗಳ ಜೊತೆ ಸಿಪಿಎಂ ಪಕ್ಷ ನಿಲ್ಲಲಿದೆ ಎಂದು ಪಕ್ಷದ ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು