3:39 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್‌ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು

14/04/2022, 00:39

ಮನಿಲಾ(reporterkarnataka.com):
ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್‌ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗಳನ್ನು ಸೃಷ್ಟಿ ಮಾಡುತ್ತಿದೆ. 85 ಕಿಮೀ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯೊಂದಿಗೆ ತೀವ್ರಗತಿಯಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅದು ಪ್ರವಾಹ ರೂಪದಲ್ಲಿ ಮುಂದುವರೆದು ಹಳ್ಳಿಹಳ್ಳಿಗಳು ಮಣ್ಣಿನಡಿ ಮುಚ್ಚಿಹೋಗುತ್ತಿವೆ. ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ದೊಡ್ಡದೊಡ್ಡ ಬೆಟ್ಟ ಗುಡ್ಡಗಳು ಕುಸಿಯುವ ಜೊತೆಗೆ ಚಂಡಮಾರುತದ ರಭಸಕ್ಕೆ ಮಣ್ಣು-ಕಲ್ಲುಗಳು ತೂರಿಬಂದು ಎಲ್ಲೆಡೆ ಅಪ್ಪಳಿಸುತ್ತಿವೆ.

ಬೇಬೇ ಸಿಟಿಯೊಂದರಲ್ಲೇ ಕುಸಿದ ಮಣ್ಣಿನಡಿ ಸಿಲುಕಿ 47 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ 100 ಜನರು ಗಾಯಗೊಂಡಿದ್ದಾರೆ.

ಲೇಯ್ಟ್‌ನಲ್ಲಿರುವ ಪಿಲಾರ್ ಗ್ರಾಮದಲ್ಲಿ ಭೂಕುಸಿತವು ಹೆಚ್ಚಿನ ಹಾನಿ ಮಾಡಿದ್ದು, ಹಲವು ಮನೆಗಳು ಮನೆಗಳನ್ನು ಸಮುದ್ರಕ್ಕೆ ಕೊಚ್ಚಿ ಹೋಗಿವೆ. ಅಲ್ಲಿನ ಕರಾವಳಿ ಪ್ರದೇಶದಿಂದ ಸುಮಾರು 400 ಜನರನ್ನು ರಕ್ಷಣಾ ಪಡೆಗಳು ದೋಣಿ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಇನ್ನೂ ಹಲವಾರು ನಗರಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು