4:08 AM Monday16 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್‌ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು

14/04/2022, 00:39

ಮನಿಲಾ(reporterkarnataka.com):
ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್‌ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗಳನ್ನು ಸೃಷ್ಟಿ ಮಾಡುತ್ತಿದೆ. 85 ಕಿಮೀ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯೊಂದಿಗೆ ತೀವ್ರಗತಿಯಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅದು ಪ್ರವಾಹ ರೂಪದಲ್ಲಿ ಮುಂದುವರೆದು ಹಳ್ಳಿಹಳ್ಳಿಗಳು ಮಣ್ಣಿನಡಿ ಮುಚ್ಚಿಹೋಗುತ್ತಿವೆ. ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ದೊಡ್ಡದೊಡ್ಡ ಬೆಟ್ಟ ಗುಡ್ಡಗಳು ಕುಸಿಯುವ ಜೊತೆಗೆ ಚಂಡಮಾರುತದ ರಭಸಕ್ಕೆ ಮಣ್ಣು-ಕಲ್ಲುಗಳು ತೂರಿಬಂದು ಎಲ್ಲೆಡೆ ಅಪ್ಪಳಿಸುತ್ತಿವೆ.

ಬೇಬೇ ಸಿಟಿಯೊಂದರಲ್ಲೇ ಕುಸಿದ ಮಣ್ಣಿನಡಿ ಸಿಲುಕಿ 47 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ 100 ಜನರು ಗಾಯಗೊಂಡಿದ್ದಾರೆ.

ಲೇಯ್ಟ್‌ನಲ್ಲಿರುವ ಪಿಲಾರ್ ಗ್ರಾಮದಲ್ಲಿ ಭೂಕುಸಿತವು ಹೆಚ್ಚಿನ ಹಾನಿ ಮಾಡಿದ್ದು, ಹಲವು ಮನೆಗಳು ಮನೆಗಳನ್ನು ಸಮುದ್ರಕ್ಕೆ ಕೊಚ್ಚಿ ಹೋಗಿವೆ. ಅಲ್ಲಿನ ಕರಾವಳಿ ಪ್ರದೇಶದಿಂದ ಸುಮಾರು 400 ಜನರನ್ನು ರಕ್ಷಣಾ ಪಡೆಗಳು ದೋಣಿ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಇನ್ನೂ ಹಲವಾರು ನಗರಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು