8:55 PM Friday22 - May 2026
ಬ್ರೇಕಿಂಗ್ ನ್ಯೂಸ್
ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ

ಇತ್ತೀಚಿನ ಸುದ್ದಿ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್‌ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು

14/04/2022, 00:39

ಮನಿಲಾ(reporterkarnataka.com):
ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್‌ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗಳನ್ನು ಸೃಷ್ಟಿ ಮಾಡುತ್ತಿದೆ. 85 ಕಿಮೀ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯೊಂದಿಗೆ ತೀವ್ರಗತಿಯಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅದು ಪ್ರವಾಹ ರೂಪದಲ್ಲಿ ಮುಂದುವರೆದು ಹಳ್ಳಿಹಳ್ಳಿಗಳು ಮಣ್ಣಿನಡಿ ಮುಚ್ಚಿಹೋಗುತ್ತಿವೆ. ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ದೊಡ್ಡದೊಡ್ಡ ಬೆಟ್ಟ ಗುಡ್ಡಗಳು ಕುಸಿಯುವ ಜೊತೆಗೆ ಚಂಡಮಾರುತದ ರಭಸಕ್ಕೆ ಮಣ್ಣು-ಕಲ್ಲುಗಳು ತೂರಿಬಂದು ಎಲ್ಲೆಡೆ ಅಪ್ಪಳಿಸುತ್ತಿವೆ.

ಬೇಬೇ ಸಿಟಿಯೊಂದರಲ್ಲೇ ಕುಸಿದ ಮಣ್ಣಿನಡಿ ಸಿಲುಕಿ 47 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ 100 ಜನರು ಗಾಯಗೊಂಡಿದ್ದಾರೆ.

ಲೇಯ್ಟ್‌ನಲ್ಲಿರುವ ಪಿಲಾರ್ ಗ್ರಾಮದಲ್ಲಿ ಭೂಕುಸಿತವು ಹೆಚ್ಚಿನ ಹಾನಿ ಮಾಡಿದ್ದು, ಹಲವು ಮನೆಗಳು ಮನೆಗಳನ್ನು ಸಮುದ್ರಕ್ಕೆ ಕೊಚ್ಚಿ ಹೋಗಿವೆ. ಅಲ್ಲಿನ ಕರಾವಳಿ ಪ್ರದೇಶದಿಂದ ಸುಮಾರು 400 ಜನರನ್ನು ರಕ್ಷಣಾ ಪಡೆಗಳು ದೋಣಿ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಇನ್ನೂ ಹಲವಾರು ನಗರಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು