4:10 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್‌ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು

14/04/2022, 00:39

ಮನಿಲಾ(reporterkarnataka.com):
ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್‌ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗಳನ್ನು ಸೃಷ್ಟಿ ಮಾಡುತ್ತಿದೆ. 85 ಕಿಮೀ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯೊಂದಿಗೆ ತೀವ್ರಗತಿಯಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅದು ಪ್ರವಾಹ ರೂಪದಲ್ಲಿ ಮುಂದುವರೆದು ಹಳ್ಳಿಹಳ್ಳಿಗಳು ಮಣ್ಣಿನಡಿ ಮುಚ್ಚಿಹೋಗುತ್ತಿವೆ. ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ದೊಡ್ಡದೊಡ್ಡ ಬೆಟ್ಟ ಗುಡ್ಡಗಳು ಕುಸಿಯುವ ಜೊತೆಗೆ ಚಂಡಮಾರುತದ ರಭಸಕ್ಕೆ ಮಣ್ಣು-ಕಲ್ಲುಗಳು ತೂರಿಬಂದು ಎಲ್ಲೆಡೆ ಅಪ್ಪಳಿಸುತ್ತಿವೆ.

ಬೇಬೇ ಸಿಟಿಯೊಂದರಲ್ಲೇ ಕುಸಿದ ಮಣ್ಣಿನಡಿ ಸಿಲುಕಿ 47 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ 100 ಜನರು ಗಾಯಗೊಂಡಿದ್ದಾರೆ.

ಲೇಯ್ಟ್‌ನಲ್ಲಿರುವ ಪಿಲಾರ್ ಗ್ರಾಮದಲ್ಲಿ ಭೂಕುಸಿತವು ಹೆಚ್ಚಿನ ಹಾನಿ ಮಾಡಿದ್ದು, ಹಲವು ಮನೆಗಳು ಮನೆಗಳನ್ನು ಸಮುದ್ರಕ್ಕೆ ಕೊಚ್ಚಿ ಹೋಗಿವೆ. ಅಲ್ಲಿನ ಕರಾವಳಿ ಪ್ರದೇಶದಿಂದ ಸುಮಾರು 400 ಜನರನ್ನು ರಕ್ಷಣಾ ಪಡೆಗಳು ದೋಣಿ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಇನ್ನೂ ಹಲವಾರು ನಗರಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು