3:15 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಭೀಕರ ಚಂಡಮಾರುತಕ್ಕೆ ಫಿಲಿಪೈನ್ಸ್‌ ತತ್ತರ; ಮಳೆ, ಭೂ ಕುಸಿತಕ್ಕೆ 58ಕ್ಕೂ ಹೆಚ್ಚು ಮಂದಿ ಸಾವು

14/04/2022, 00:39

ಮನಿಲಾ(reporterkarnataka.com):
ಭೀಕರ ಪ್ರಾಕೃತಿಕ ವಿಕೋಪದಿಂದ ಫಿಲಿಪೈನ್ಸ್‌ ದ್ವೀಪಸಮೂಹವು ತತ್ತರಿಸಿ ಹೋಗುತ್ತಿದೆ. ಮಳೆ- ಭೂಕುಸಿತ ಮತ್ತು ಪ್ರವಾಹದಿಂದಾಗಿ ಈ ವರೆಗೆ 58ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಫಿಲಿಪೈನ್ಸ್‌ಗೆ ಅಪ್ಪಳಿಸಿರುವ ಉಷ್ಣವಲಯದ ಚಂಡಮಾರುತವಾದ ಮೇಗಿಯು ಭಯಾನಕ ಅವಘಡಗಳನ್ನು ಸೃಷ್ಟಿ ಮಾಡುತ್ತಿದೆ. 85 ಕಿಮೀ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯೊಂದಿಗೆ ತೀವ್ರಗತಿಯಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ಅದು ಪ್ರವಾಹ ರೂಪದಲ್ಲಿ ಮುಂದುವರೆದು ಹಳ್ಳಿಹಳ್ಳಿಗಳು ಮಣ್ಣಿನಡಿ ಮುಚ್ಚಿಹೋಗುತ್ತಿವೆ. ರಕ್ಷಣಾ ಪಡೆಗಳು ಜನರ ರಕ್ಷಣಾ ಕಾರ್ಯದಲ್ಲಿ ನಿರಂತರವಾಗಿ ತೊಡಗಿವೆ. ದೊಡ್ಡದೊಡ್ಡ ಬೆಟ್ಟ ಗುಡ್ಡಗಳು ಕುಸಿಯುವ ಜೊತೆಗೆ ಚಂಡಮಾರುತದ ರಭಸಕ್ಕೆ ಮಣ್ಣು-ಕಲ್ಲುಗಳು ತೂರಿಬಂದು ಎಲ್ಲೆಡೆ ಅಪ್ಪಳಿಸುತ್ತಿವೆ.

ಬೇಬೇ ಸಿಟಿಯೊಂದರಲ್ಲೇ ಕುಸಿದ ಮಣ್ಣಿನಡಿ ಸಿಲುಕಿ 47 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಮಂದಿ ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ 100 ಜನರು ಗಾಯಗೊಂಡಿದ್ದಾರೆ.

ಲೇಯ್ಟ್‌ನಲ್ಲಿರುವ ಪಿಲಾರ್ ಗ್ರಾಮದಲ್ಲಿ ಭೂಕುಸಿತವು ಹೆಚ್ಚಿನ ಹಾನಿ ಮಾಡಿದ್ದು, ಹಲವು ಮನೆಗಳು ಮನೆಗಳನ್ನು ಸಮುದ್ರಕ್ಕೆ ಕೊಚ್ಚಿ ಹೋಗಿವೆ. ಅಲ್ಲಿನ ಕರಾವಳಿ ಪ್ರದೇಶದಿಂದ ಸುಮಾರು 400 ಜನರನ್ನು ರಕ್ಷಣಾ ಪಡೆಗಳು ದೋಣಿ ಮೂಲಕ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ. ಇನ್ನೂ ಹಲವಾರು ನಗರಗಳಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು