8:04 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬಿಜೈ ಸಮೀಪ ಮನೆ ದರೋಡೆ: ಮನೆಮಂದಿಯ ಕಟ್ಟಿ ಹಾಕಿ ಹಲ್ಲೆ; ಚಡ್ಡಿ ಗ್ಯಾಂಗ್ ಕೃತ್ಯ?

09/07/2024, 12:28

ಮಂಗಳೂರು(reporterkarnataka.com):ಉರ್ವ ಬಳಿ ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಮನೆ ದರೋಡೆಗೆ ವಿಫಲ ಯತ್ನ ನಡೆಸಿದ ಬೆನ್ನಲ್ಲೇ
ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಕೋಟೆಕಣಿ ಸಮೀಪ ಇಂದು
ಮುಂಜಾನೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಇಬ್ಬರನ್ನು ಕಟ್ಟಿಹಾಕಿ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿದ ಘಟನೆ ನಡೆದಿದೆ.
ಚಡ್ಡಿ ಗ್ಯಾಂಗ್ ತಂಡ ಉರ್ವದಲ್ಲಿ ಮನೆ ದರೋಡೆಗೆ ಯತ್ನಿಸಿತ್ತು. ಸುಮಾರು 5 ಮಂದಿ ಇದ್ದ ತಂಡ ಕಳ್ಳತನಕ್ಕೆ ಯತ್ನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಬಿಜೈ ಪ್ರಕರಣದಲ್ಲಿ ದರೋಡೆಕೋರರು ಕಾರಿನಲ್ಲಿ ಆಗಮಿಸಿದ್ದು, ಹೆಜಮಾಡಿ ಟೋಲ್ ಗೇಟ್ ಸಮೀಪ ಕಾರು ನಿಲ್ಲಿಸಿ ಪರಾರಿಯಾಗಿದ್ದಾರೆ. ಉರ್ವ ಪೊಲೀಸರು, ಹಿರಿಯ ಅಧಿಕಾರಿಗಳು, ಬೆರಳಚ್ಚು ತಜ್ಞರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಲ್ಕಿ ಪೊಲೀಸರು ಕಾರನ್ನು ಪತ್ತೆಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಪೊಲೀಸರು ದರೋಡೆಗೈದ ಮನೆಯ ಸುತ್ತಮುತ್ತ, ರಸ್ತೆ, ಹೆದ್ದಾರಿಯ ಸಿಸಿ ಕ್ಯಾಮೆರಾಗಳನ್ನು ಶೋಧ ನಡೆಸುತ್ತಿದ್ದಾರೆ. ಇದು ಕೂಡ ಚಡ್ಡಿ ಗ್ಯಾಂಗ್ ಕೃತ್ಯ ಇರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು