10:19 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬಿಜೈ ಶ್ರೀಮಂತಿ ಬಾಯಿ ಸ್ಮಾರಕ ಸರಕಾರಿ ಮ್ಯೂಸಿಯಂನಲ್ಲಿ ವಿಶೇಷ ಚಿತ್ರಕಲೆ, ಅಂಚೆ ಚೀಟಿ ಪ್ರದರ್ಶನ

18/04/2023, 21:02

ಮಂಗಳೂರು(reporterkarnataka.com): ವಿಶ್ವ ಪರಂಪರೆ ದಿನಾಚರಣೆಯ ಪ್ರಯುಕ್ತ
ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಚೀಟಿ ಮತ್ತು ನಾಣ್ಯಗಳ ಸಂಗ್ರಹಕಾರರ ಸಮಿತಿ ವತಿಯಿಂದ ನಗರದ ಬಿಜೈ ಶ್ರೀಮಂತಿ ಬಾಯಿ ಸ್ಮಾರಕ ಸರಕಾರಿ ವಸ್ತು ಸಂಗ್ರಹಾಲಯದಲ್ಲಿ ವಿಶೇಷ ಚಿತ್ರಕಲೆ ಪ್ರದರ್ಶನ (ದಕ್ಷಿಣ ಕನ್ನಡ ಜಿಲ್ಲೆಯ ಪರಂಪರೆ ಸಂಬಂಧಿತ) ಬೆಳಗ್ಗೆ 10 ರಿಂದ 5.30 ರವರೆಗೆ ಆಯೋಜಿಸಲಾಗಿತು.


ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ಡಾ. ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಭಾಕರ ಕಾಮತ್, ಶಿವಕುಮಾರ್, ಸಂತೋಷ್ ಪ್ರಭು, ಮತ್ತು ವೀಣಾ ಶ್ರೀನಿವಾಸ್ ಇವರುಗಳು ಸಮಿತಿಯ ಸದಸ್ಯರಾಗಿದ್ದು ತಮ್ಮ ಸಂಗ್ರಹಣೆಗಳಾದ ವಿಶೇಷ ಅಂಚೆ ಚೀಟಿ, ಗಾಂಧೀಜಿಯವರ ಅಂಚೆ ಲಕೋಟೆಗಳು, ಪಾರಂಪರಿಕ ಗೃಹಬಳಕೆ ಸಾಮಾಗ್ರಿಗಳು, ನಾಣ್ಯಗಳು, ಕರಾವಳಿಯ ಪ್ರಥಮ ಕೈ ಗಡಿಯಾರ ಸಂಗ್ರಹಗಳು, ಕಾವಿಕಲೆಯ ಚಿತ್ರಕಲೆಗಳು, ಹಾಗೂ ಕರಾವಳಿ ಚಿತ್ರ ಕಲಾ ಚಾವಡಿ ಸದಸ್ಯರ ಅಪರೂಪದ ಪಾರಂಪರಿಕ ಚಿತ್ರಕಲೆಗಳ ಪ್ರದರ್ಶನವನ್ನು ಏರ್ಪಡಿಸಿದ್ದರು. ವಿಶೇಷ ಅತಿಥಿಗಳಾದ ಶ್ರೀ ಹರ್ಷ ಎಸ್.ಎಸ್.ಪಿ, ಅಂಚೆ ಇಲಾಖೆ, ಮಂಗಳೂರು ಆಗಮಿಸಿ ಕರ್ನಲ್ ಮಿರಾಜಕರ್ ರವರ ವಿಶೇಷ ಅಂಚೆ ಚೀಟಿ ಲಕೋಟೆಯ ಭಾವಚಿತ್ರವನ್ನು ಕಾರ್ಯನಿರ್ವಹಣಾ ಅಧಿಕಾರಿಯವರ ಸಮ್ಮುಖದಲ್ಲಿ ಬಿಡುಗಡೆ ಗೊಳಿಸಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು, ಅಂಚೆ ಚೀಟಿ ಸಿಬ್ಬಂದಿಗಳು ಮಾಧ್ಯಮದವರು, ವೀಕ್ಷಕರು, ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು. ಈ ಸಂಧರ್ಭದಲ್ಲಿ ವಿಶೇಷವಾಗಿ ಕಾರ್ಯನಿರ್ವಹಣಾ ಅಧಿಕಾರಿಯವರು ಮತದಾನ ಜಾಗೃತಿ ಕುರಿತು ವಿಶೇಷ ಭಾವಚಿತ್ರಗಳನ್ನು ಪ್ರದರ್ಶಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು