7:50 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಬಿಜೈ ಯುನಿಸೆಕ್ಸ್ ಸಲೂನ್ ಗೆ ತಂಡದಿಂದ ದಾಳಿ: ಸಿಬ್ಬಂದಿಗಳ ಮೇಲೆ ಹಲ್ಲೆ; ಪೀಠೋಪಕರಣಗಳಿಗೆ ಹಾನಿ

23/01/2025, 17:20

ಮಂಗಳೂರು(reporterkarnataka.com): ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಯುನಿಸೆಕ್ಸ್ ಸಲೂನ್ ಗೆ ತಂಡವೊಂದು ಗುರುವಾರ ದಾಳಿ ನಡೆಸಿ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ,ಪೀಠೋಕರಣಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ.
ಕಲರ್ಸ್ ಯುನಿಸೆಕ್ಸ್ ಸಲೂನ್ ಗೆ ಸುಮಾರು 9-10 ಅಪರಿಚಿತ ವ್ಯಕ್ತಿಗಳ ತಂಡ ಕಾನೂನುಬಾಹಿರವಾಗಿ ಪ್ರವೇಶಿಸಿ ಸೆಲೂನಿನ ಪೀಠೋಕರಣಗಳಿಗೆ ಹಾನಿ ಮಾಡಿದೆ. ಅವರು ಅನೈತಿಕ ಚಟುವಟಿಕೆಗಳನ್ನು ಆರೋಪಿಸಿ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಗುಂಪು ಸಲೂನಿನ ಸೊತ್ತುಗಳಿಗೆ ಹಾನಿಯುಂಟು ಮಾಡಿದೆ.


ಈ ವೇಳೆ ಇಬ್ಬರು ಸಿಬ್ಬಂದಿಯ ಮೇಲೂ ಹಲ್ಲೆಯೂ ನಡೆದಿದೆ. ಒಳನುಗ್ಗಿದವರಲ್ಲಿ ಒಬ್ಬರು ಈ ಘಟನೆಯನ್ನು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ ಎಂದು ಸೆಲೂನ್ ಮಾಲಿಕನ ದೂರು ನೀಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು