12:03 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಬಿಜೈ ಯುನಿಸೆಕ್ಸ್ ಸಲೂನ್ ಗೆ ತಂಡದಿಂದ ದಾಳಿ: ಸಿಬ್ಬಂದಿಗಳ ಮೇಲೆ ಹಲ್ಲೆ; ಪೀಠೋಪಕರಣಗಳಿಗೆ ಹಾನಿ

23/01/2025, 17:20

ಮಂಗಳೂರು(reporterkarnataka.com): ನಗರದ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಯುನಿಸೆಕ್ಸ್ ಸಲೂನ್ ಗೆ ತಂಡವೊಂದು ಗುರುವಾರ ದಾಳಿ ನಡೆಸಿ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ,ಪೀಠೋಕರಣಗಳಿಗೆ ಹಾನಿ ಮಾಡಿದ ಘಟನೆ ನಡೆದಿದೆ.
ಕಲರ್ಸ್ ಯುನಿಸೆಕ್ಸ್ ಸಲೂನ್ ಗೆ ಸುಮಾರು 9-10 ಅಪರಿಚಿತ ವ್ಯಕ್ತಿಗಳ ತಂಡ ಕಾನೂನುಬಾಹಿರವಾಗಿ ಪ್ರವೇಶಿಸಿ ಸೆಲೂನಿನ ಪೀಠೋಕರಣಗಳಿಗೆ ಹಾನಿ ಮಾಡಿದೆ. ಅವರು ಅನೈತಿಕ ಚಟುವಟಿಕೆಗಳನ್ನು ಆರೋಪಿಸಿ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಗುಂಪು ಸಲೂನಿನ ಸೊತ್ತುಗಳಿಗೆ ಹಾನಿಯುಂಟು ಮಾಡಿದೆ.


ಈ ವೇಳೆ ಇಬ್ಬರು ಸಿಬ್ಬಂದಿಯ ಮೇಲೂ ಹಲ್ಲೆಯೂ ನಡೆದಿದೆ. ಒಳನುಗ್ಗಿದವರಲ್ಲಿ ಒಬ್ಬರು ಈ ಘಟನೆಯನ್ನು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡುತ್ತಿರುವುದು ಕಂಡುಬಂದಿದೆ ಎಂದು ಸೆಲೂನ್ ಮಾಲಿಕನ ದೂರು ನೀಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು