12:43 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಬೇಕಾಬಿಟ್ಟಿ ರಸ್ತೆ ಅಗೆದು ಯಾರಾದರು ಗುಂಡಿಗೆ ಬಿದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ: ಗೇಲ್ ಅಧಿಕಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

04/01/2023, 21:25

ಮಂಗಳೂರು(reporterkarnataka.com): ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನಗರದ ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು, ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು. ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ ಎಂದರು.
ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂಪೆನಿ ಅಧಿಕಾರಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು