11:06 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ವಿವಿಧ ಬೇಡಿಕೆ ಆಗ್ರಹಿಸಿ ಇಂದು ಪತ್ರಕರ್ತರ ಧ್ವನಿಯಿಂದ ಧರಣಿ

27/12/2022, 09:30

ರಾಯಚೂರು(reporterkarnataka.com):ಪತ್ರಕರ್ತರ ಕೌಟುಂಬಿಕ ಭದ್ರತೆಯ ಸಮಸ್ಯೆಗಳಾದ ವಿಮೆ, ಗೌರವಧನ, ಉಚಿತ ಬಸ್ ಪಾಸ್ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27ರಂದು ಬೆಳಗಾವಿ ಅಧಿವೇಶನದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಮಸ್ಕಿ ತಾಲೂಕು ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಮಠ ಅಂತರಗಂಗೆ ಹೇಳಿದರು.

ಅವರು ಮಸ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಪತ್ರಕರ್ತರು ವಿತರಕರು ಛಾಯಾಗ್ರಹಕರು ಎಲೆಕ್ಟ್ರಾನಿಕ್ ಮಾಧ್ಯಮದವರು ಸೇರಿದಂತೆ ಮತ್ತಿತರರು ದಿನಂಪ್ರತಿ ಪತ್ರಿಕೆ ರಂಗದಲ್ಲಿ ಕೆಲಸ ಮಾಡುತ್ತಿದ್ದು ಅವರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕೆಂದು ಧರಣಿಯಲ್ಲಿ ಒತ್ತಾಯಿಸಲಾಗುವುದು. ಆದ್ದರಿಂದ ಜಿಲ್ಲೆಯ ಎಲ್ಲಾ ತಾಲೂಕಿನ ನನ್ನ ಆತ್ಮೀಯ ಸ್ನೇಹಿತರು ಪತ್ರಕರ್ತರು ಧರಣಿಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಕಾರ್ಯದರ್ಶಿ ವಿರುಪಾಕ್ಷಗೌಡ ತಾಲೂಕು ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿಗಳು, ಹಟ್ಟಿ ಹೋಬಳಿ ಅಧ್ಯಕ್ಷರಾದ ಶ್ರೀನಿವಾಸ್ ಮಧುಶ್ರೀ, ಮಸ್ಕಿ ತಾಲೂಕು ಗೌರವಾಧ್ಯಕ್ಷರು ಮಾಂತೇಶ್ ಪಟ್ಟಣಶೆಟ್ಟಿ, ಹಟ್ಟಿ ಪಟ್ಟಣದ ವಿಘ್ನೇಶ್ ಹಿರೇ ನಗನೂರು ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು