5:25 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬೆಳಗಾವಿ ವಿಧಾನ ಮಂಡಳ ಚಳಿಗಾಲ ಅಧಿವೇಶನ: ಅಗತ್ಯ ಸಿದ್ಧತೆಗೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

18/10/2024, 20:32

ಬೆಳಗಾವಿ(reporterkarnataka.com): ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ ನೀಡಿದರು.
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು.
ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಾಲಯದ‌ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು.
ಸುವರ್ಣ ಸೌಧದ ಪ್ರವೇಶ ದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರತಿಭಟನಾ ಸ್ಥಳ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಿ ನಿರಂತರವಾಗಿ ನಿಗಾವಹಿಸಲು ತಿಳಿಸಿದರು.
ಅಧಿವೇಶನ‌ದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಸುವರ್ಣ ಸೌಧದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಲಾಪಗಳ‌ ವೀಕ್ಷಣೆಗೆ ಆಗಮಿಸುವ ಶಾಲೆಗಳ ವಿವರಗಳನ್ನು‌ ಮುಂಚಿತವಾಗಿ ನೀಡಬೇಕು. ಕಾಯುವಿಕೆ ಸಮಯದಲ್ಲಿ‌ ಮಕ್ಕಳಿಗೆ ನೆರಳಿನ ವ್ಯವಸ್ಥೆ ಮಾಡಬೇಕು.
ಕಳೆದ ಬಾರಿಯ ಅಧಿವೇಶನದಂತೆ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಅಚ್ಚುಕಟ್ಟಾಗಿ ಜರುಗಿಸಬೇಕು.‌ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರ‌ ಮೂಲಕ ಚಳಿಗಾಲದ ಅಧಿವೇಶನವನ್ನು ಯಶಸ್ವಿಗಾಗಿ ಎಲ್ಲ‌ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಖಾದರ್ ತಿಳಿಸಿದರು.
ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರು‌ ಮಾತನಾಡಿ, ಕಳೆದ‌ ಬಾರಿಯಂತೆ ಈ ಬಾರಿಯು ಪ್ರತಿದಿನ ಬೇರೆ ಬೇರೆ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಕಾರ್ಯಕ್ರಮಗಳಿಗೆ ಅಕ್ಕಪಕ್ಕದ‌ ಜಿಲ್ಲೆಗಳ ಕಲಾವಿದರಿಗೆ ಆದ್ಯತೆ ನೀಡಬೇಕು ಎಂದರು.
ಅಧಿವೇಶನದ ಸಂದರ್ಭದಲ್ಲಿ ಅಂತರ್ಜಾಲ‌ ವ್ಯವಸ್ಥೆಯಲ್ಲಿ ಯಾವುದೇ ಅಡತಡೆ ಆಗದಂತೆ‌ ನೋಡಿಕೊಳ್ಳಲು ಸೂಚಿಸಿದರು. ಶಾಸಕರು, ಸಚಿವರುಗಳು ವಾಸ್ತವ್ಯ ಮಾಡುವಂತಹ ಹೊಟೆಲಗಳಲ್ಲಿ ಸಾರ್ವಜನಿಕರ‌ ಭೇಟಿಗೆ ಲಾಂಜ್ ವ್ಯವಸ್ಥೆ ಮಾಡಬೇಕು. ಈ ಕುರಿತು ಹೋಟೆಲ್‌ ಮಾಲಿಕರೊಂದಿಗೆ ಸಭೆ ಜರುಗಿಸಿ ಸೂಕ್ತ ನಿರ್ದೆಶನಗಳನ್ನು ನೀಡಲು ತಿಳಿಸಿದರು.
ಸುವರ್ಣ ಸೌಧದಲ್ಲಿ ಶಾಸಕರ‌ ಭವನ‌ ನಿರ್ಮಾಣ ಹಾಗೂ ನಿರಂತರ‌ ನೀರು‌‌‌ ಪೂರೈಕೆಗೆ ಸಂಬಂಧಿಸಿದಂತೆ ಯೋಜನೆಯನ್ನು ರೂಪಿಸಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ‌ ಮೊಹಮ್ಮದ್‌ ರೋಷನ್ ಅವರು‌ ಮಾತನಾಡಿ, ಅಧಿವೇಶನವನ್ನು ವ್ಯವಸ್ಥಿತವಾಗಿ ಜರುಗಿಸುವ‌ ಹಿನ್ನೆಲೆಯಲ್ಲಿ ವಸತಿ, ಆಹಾರ‌ ಹಾಗೂ ಭದ್ರತಾ‌ ಸಮಿತಿಗಳನ್ನು ರಚಿಸಿ ಸಭೆಗಳನ್ನು ಆಯೋಜಿಸಲಾಗಿದೆ. ಅಧಿವೇಶನಕ್ಕೆ‌ ಆಗಮಿಸುವ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಸೂಕ್ತ‌ ವಸತಿ‌ ಹಾಗೂ ಊಟೋಪಹಾರದ ಕಲ್ಪಿಸಲು ಸಭೆಯಲ್ಲಿ‌ ಚರ್ಚಿಸಲಾಗಿರುತ್ತದೆ. ಅಲ್ಲದೇ ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ‌ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.
ಸುವರ್ಣ ಸೌಧದಲ್ಲಿ ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಹಾಗೂ ಪೋಲಿಸ್ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ ಸುಮಾರು ನಾಲ್ಕು‌ ಖಾಸಗಿ ಕ್ಯಾಂಟಿನ್ ಗಳನ್ನು ತೆರೆಯಲಾಗುವುದು.
ಡಿಸಿಪಿ ರೋಹನ ಜಗದೀಶ‌ ಕಳೆದ ಅಧಿವೇಶನಕ್ಕೆ ಅಂದಾಜು ಐದು ಸಾವಿರ ಪೋಲಿಸ್ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ‌ ಹಾಗೂ ಸಿಬ್ಬಂದಿಗಳಿಗೆ ಅಚ್ವುಕಟ್ಟಾದ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಗಳಲ್ಲಿ ಅಗತ್ಯ ಪೋಲಿಸ್ ಬಂದೋಬಸ್ತ್ ಜೊತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಸಭೆಯಲ್ಲಿ ಶಾಸಕರಾದ ರಾಜು(ಆಸೀಫ್)ಸೇಠ ಕರ್ನಾಟಕ ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿಗಳಾದ ಮಹಾಲಕ್ಷ್ಮೀ, ಜಿಲ್ಲಾ‌ ಪೊಲಿಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ,
ಜಿಲ್ಲಾ ಪಂಚಾಯತ ಸಿ.ಇ.ಓ. ರಾಹುಲ್ ಶಿಂಧೆ,
ಪ್ರಶಿಕ್ಷಣಾರ್ಥಿ ಆಯ್.ಎಸ್. ಅಧಿಕಾರಿ ದಿನೇಶಕುಮಾರ್ ಮೀನಾ, ವಿವಿಧ ಇಲಾಖೆಗಳ‌ ಅಧಿಕಾರಿಗಳು ಉಪಸ್ಥಿತರಿದ್ದರು.
*ಸುವರ್ಣಸೌಧ ಪರಿಶೀಲನೆ;*
ಸಭೆಗೂ ಮುಂಚೆ ಸ್ಪೀಕರ್ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರು ಸುವರ್ಣಸೌಧದ ವಿವಿಧ ಸಭಾಂಗಣಗಳನ್ನು ವೀಕ್ಷಿಸಿದರು‌.
ಇದೇ ಸ್ವಚ್ಛತಾ ಸಿಬ್ಬಂದಿಗಳನ್ನು ಮಾತನಾಡಿಸಿದ ಯು.ಟಿ.ಖಾದರ್ ಅವರು, ದೈನಂದಿನ ಸ್ವಚ್ಛತಾ ಕೆಲಸದ ಕುರಿತು ಮಾಹಿತಿ ಪಡೆದುಕೊಂಡರು.


ತದನಂತರ ವಿಧಾನ ಸಭೆ, ವಿಧಾನ‌ ಪರಿಷತ್ ಸಭಾಂಗಣಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಸ್ವಚ್ಛತೆ, ಆಸನಗಳ ನಿರ್ವಹಣೆ, ಪ್ರವೇಶ ದ್ವಾರದ ಬ್ಯಾಗೇಜ್ ಸ್ಕ್ಯಾನರ್ ಮತ್ತಿತರ ವ್ಯವಸ್ಥೆಗಳನ್ನು ಮುಂಚಿತವಾಗಿ ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು