2:42 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ವಿಶೇಷಚೇತನರ ಸೌರ ಸ್ವಉದ್ಯೋಗ ಸಮ್ಮೇಳನ: ಸೌರ ಉದ್ಯಮಿಗಳು ಭಾಗಿ

21/11/2023, 19:06

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnatakarma@gmail.com

ಸೆಲ್ಕೋ ಫೌಂಡೇಶನ್ ಇಂಡಿಯಾ ಸಂಸ್ಥೆ, ಎಪಿಡಿ ಸಂಸ್ಥೆ ಬೆಳಗಾವಿ, ಬರ್ಡ್ ಸಂಸ್ಥೆ,ಬೆಳಗಾವಿಯ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನರ ಸೌರ ಸ್ವ ಉದ್ಯೋಗ ಸಮ್ಮೇಳನವನ್ನು ನಗರದ ಕುಮಾರಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾ ಪಂಚಾಯತ್ ಸಿಇಒ
ಹರ್ಷಲ್ ಬೋಯರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಹರ್ಷಲ್ ಬೋಯರ್, ಸೌರಶಕ್ತಿ ಬಳಸಿಕೊಂಡು ಸ್ವಯಂ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಸೆಲ್ಕೋ ಫೌಂಡೇಶನ್ ಸಂಸ್ಥೆ ಉತ್ತಮ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಮಹಾಪ್ರಬಂಧಕರಾದ ಪ್ರಸನ್ನ ಹೆಗಡೆ ಅವರು ಮಾತನಾಡಿ, ಸೌರಶಕ್ತಿಯು ಕೇವಲ ಬೆಳಕು ನೀಡುವುದಲ್ಲದೆ ಜೀವನ ಕಟ್ಟಿಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಗ್ರಾಮೀಣ ಭಾಗದ ಕಟ್ಟಕಡೆ ವ್ಯಕ್ತಿಗೂ ಸೌರಶಕ್ತಿಯನ್ನು ತಲುಪಿಸುತ್ತಿದ್ದೇವೆ ಎಂದರು.
ದಿ ಅಸೋಶಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿಯ(ಎಪಿಡಿ) ವಿಭಾಗೀಯ ನಿರ್ದೇಶಕರಾದ ರಮೇಶ್ ಗೊಂಗಡಿ ಮಾತನಾಡಿ, ವಿಶೇಷಚೇತನರನ್ನು ಸುಶಿಕ್ಷಿತರನ್ನಾಗಿಸುವುದರ ಜೊತೆಗೆ ಸೆಲ್ಕೋ ಸಹಯೋಗದೊಂದಿಗೆ ಅವರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದರು.
ಬಾಗಲಕೋಟೆಯ ಬರ್ಡ್ಸ್ ಸಂಸ್ಥೆಯ ಮಹಾಂತೇಶ್ ಅಗಸಿ ಮುಂದಿನ ಅವರು ಮಾತನಾಡಿ, ಕಳೆದ 8 ವರ್ಷಗಳಿಂದ ಸೆಲ್ಕೋ ಸಂಸ್ಥೆಯ ಜೊತೆ ಸೇರಿ ಅನೇಕ ವಿಶೇಷಚೇತನರಿಗೆ ಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಮಾಜಿ ಶಾಸಕರು ಹಾಗೂ ನಾಗನೂರ ಬರ್ಡ್ಸ್ ಸಂಸ್ಥೆ ಅಧ್ಯಕ್ಷ ಆರ್. ಎಮ್. ಪಾಟೀಲ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಎರಡು ವಿಶೇಷ ಗುಂಪು ಚರ್ಚೆಗಳನ್ನು ಸೆಲ್ಕೋ ಫೌಂಡೇಷನ್ ನ ಹಿರಿಯ ನಿರ್ವಾಹಕರಾದ ಸುರಭಿ ರಾಜಗೋಪಾಲ್ ಮತ್ತು ಸೆಲ್ಕೋ ಫೌಂಡೇಷನ್ ನ ಪ್ರಾಜೆಕ್ಟ್ ಮ್ಯಾನೇಜರ್ ನಾಗೇಶ್ ರಾವ್ ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಕೆಲವು ಸೌರ ಉದ್ಯಮಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಸೆಲ್ಕೋದ ಬೆಳಗಾವಿ ಏರಿಯಾ ಮ್ಯಾನೇಜರ್ ವಿನಾಯಕ ಹೆಗಡೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು