12:06 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ವಿಶೇಷಚೇತನರ ಸೌರ ಸ್ವಉದ್ಯೋಗ ಸಮ್ಮೇಳನ: ಸೌರ ಉದ್ಯಮಿಗಳು ಭಾಗಿ

21/11/2023, 19:06

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnatakarma@gmail.com

ಸೆಲ್ಕೋ ಫೌಂಡೇಶನ್ ಇಂಡಿಯಾ ಸಂಸ್ಥೆ, ಎಪಿಡಿ ಸಂಸ್ಥೆ ಬೆಳಗಾವಿ, ಬರ್ಡ್ ಸಂಸ್ಥೆ,ಬೆಳಗಾವಿಯ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನರ ಸೌರ ಸ್ವ ಉದ್ಯೋಗ ಸಮ್ಮೇಳನವನ್ನು ನಗರದ ಕುಮಾರಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾ ಪಂಚಾಯತ್ ಸಿಇಒ
ಹರ್ಷಲ್ ಬೋಯರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಹರ್ಷಲ್ ಬೋಯರ್, ಸೌರಶಕ್ತಿ ಬಳಸಿಕೊಂಡು ಸ್ವಯಂ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಸೆಲ್ಕೋ ಫೌಂಡೇಶನ್ ಸಂಸ್ಥೆ ಉತ್ತಮ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಮಹಾಪ್ರಬಂಧಕರಾದ ಪ್ರಸನ್ನ ಹೆಗಡೆ ಅವರು ಮಾತನಾಡಿ, ಸೌರಶಕ್ತಿಯು ಕೇವಲ ಬೆಳಕು ನೀಡುವುದಲ್ಲದೆ ಜೀವನ ಕಟ್ಟಿಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಗ್ರಾಮೀಣ ಭಾಗದ ಕಟ್ಟಕಡೆ ವ್ಯಕ್ತಿಗೂ ಸೌರಶಕ್ತಿಯನ್ನು ತಲುಪಿಸುತ್ತಿದ್ದೇವೆ ಎಂದರು.
ದಿ ಅಸೋಶಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿಯ(ಎಪಿಡಿ) ವಿಭಾಗೀಯ ನಿರ್ದೇಶಕರಾದ ರಮೇಶ್ ಗೊಂಗಡಿ ಮಾತನಾಡಿ, ವಿಶೇಷಚೇತನರನ್ನು ಸುಶಿಕ್ಷಿತರನ್ನಾಗಿಸುವುದರ ಜೊತೆಗೆ ಸೆಲ್ಕೋ ಸಹಯೋಗದೊಂದಿಗೆ ಅವರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದರು.
ಬಾಗಲಕೋಟೆಯ ಬರ್ಡ್ಸ್ ಸಂಸ್ಥೆಯ ಮಹಾಂತೇಶ್ ಅಗಸಿ ಮುಂದಿನ ಅವರು ಮಾತನಾಡಿ, ಕಳೆದ 8 ವರ್ಷಗಳಿಂದ ಸೆಲ್ಕೋ ಸಂಸ್ಥೆಯ ಜೊತೆ ಸೇರಿ ಅನೇಕ ವಿಶೇಷಚೇತನರಿಗೆ ಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಮಾಜಿ ಶಾಸಕರು ಹಾಗೂ ನಾಗನೂರ ಬರ್ಡ್ಸ್ ಸಂಸ್ಥೆ ಅಧ್ಯಕ್ಷ ಆರ್. ಎಮ್. ಪಾಟೀಲ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಎರಡು ವಿಶೇಷ ಗುಂಪು ಚರ್ಚೆಗಳನ್ನು ಸೆಲ್ಕೋ ಫೌಂಡೇಷನ್ ನ ಹಿರಿಯ ನಿರ್ವಾಹಕರಾದ ಸುರಭಿ ರಾಜಗೋಪಾಲ್ ಮತ್ತು ಸೆಲ್ಕೋ ಫೌಂಡೇಷನ್ ನ ಪ್ರಾಜೆಕ್ಟ್ ಮ್ಯಾನೇಜರ್ ನಾಗೇಶ್ ರಾವ್ ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಕೆಲವು ಸೌರ ಉದ್ಯಮಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಸೆಲ್ಕೋದ ಬೆಳಗಾವಿ ಏರಿಯಾ ಮ್ಯಾನೇಜರ್ ವಿನಾಯಕ ಹೆಗಡೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು