1:57 AM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಚಳ್ಳಕೆರೆ ನಗರದಲ್ಲಿ ಯುಜಿಡಿ ನಿರ್ಮಾಣಕ್ಕೆ 260 ಕೋಟಿ ಅನುದಾನ ಒದಗಿಸಲು ಶಾಸಕ ರಘುಮೂರ್ತಿ ಆಗ್ರಹ

12/12/2024, 18:00

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmsil.com

ಚಳ್ಳಕೆರೆ ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು 260 ಕೋಟಿ ರೂ.ಗಳ ಅನುದಾನ ಒದಗಿಸುವಂತೆ ಶಾಸಕ ಟಿ. ರಘುಮೂರ್ತಿ ಆಗ್ರಹಿಸಿದರು.
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಅವರು ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯುವ ಸೂಚನೆಯಡಿ ಮಾತನಾಡಿ, ಚಳ್ಳಕೆರೆ ನಗರವು ಬೆಳೆಯುತ್ತಿರುವ ವೇಗಕ್ಕೆ ಅನುಗುಣವಾಗಿ, ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ) ನಿರ್ಮಾಣಕ್ಕೆ ಅಗತ್ಯವಿರುವ 260 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಒತ್ತಾಯಿಸಿದರು.
ಚಳ್ಳಕೆರೆ ನಗರಕ್ಕೆ ಒಳಚರಂಡಿ ವ್ಯವಸ್ಥೆ (ಯುಜಿಡಿ) ಕಲ್ಪಿಸಲು 2013ರಲ್ಲಿಯೇ ಪ್ರಸ್ತಾಪಿಸಲಾಗಿತ್ತು. ಬಳಿಕ 2021ರಲ್ಲಿ ಈ ಯೋಜನೆಗೆ 197 ಕೋಟಿ ರೂ. ಗಳ ಅಂದಾಜು ಮಾಡಲಾಗಿತ್ತು. ಇದೀಗ ಯೋಜನೆಯ ವೆಚ್ಚ 253 ಕೋಟಿ ರೂ. ಆಗಿದೆ. ಈಗ ಮತ್ತೊಮ್ಮೆ‌ ಮನವಿ ಸಲ್ಲಿಸಲಾಗುತ್ತಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಭೈರತಿ ಸುರೇಶ್ ಅವರು, 2015ರಲ್ಲಿ ಈ ಯೋಜನೆ 100 ಕೋಟಿ ರೂ. ಗಳ ವೆಚ್ಚದಲ್ಲಿ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಸುಮಾರು 260 ಕೋಟಿ ರೂ. ಗಳ ವೆಚ್ಚದ ಅಂದಾಜು ಮಾಡಲಾಗಿದೆ. ಹೀಗಾಗಿ ಹಣಕಾಸು ಇಲಾಖೆಯ ಸಲಹೆ ಪಡೆದು, ಹಣಕಾಸಿನ ಲಭ್ಯತೆ ನೋಡಿಕೊಂಡು, ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು