ಇತ್ತೀಚಿನ ಸುದ್ದಿ
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್ ಕಟ್ಟಡ; ತಪ್ಪಿದ ಭಾರೀ ಅನಾಹುತ
06/06/2026, 14:46
ಬೆಳಗಾವಿ(reporterkarnataka.com): ಮಳೆ ಅಬ್ಬರಕ್ಕೆ ಬೃಹತ್ ಕಟ್ಟಡವೊಂದು ನೆಲಕ್ಕುರುಳಿದ ಘಟನೆ ಅಥಣಿಯಲ್ಲಿ ನಡೆದಿದೆ.
ಕಳೆದ ರಾತ್ರಿ ಸುರಿದ ಮಳೆಗೆ ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಕಟ್ಟಡ ಬೀಳುವ ಸಂದರ್ಭದಲ್ಲಿ ಯಾರು ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಪ್ರಕರಣ ಅಥಣಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕುಸಿದು ಬಿದ್ದ ಈ ಕಟ್ಟಡ ರಾವಸಾಬ ಐಹೊಳೆ ಎಂಬವವರಿಗೆ ಸೇರಿದೆ ಎಂದು ತಿಳಿದು ಬಂದಿದೆ.












