2:43 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬೆಳಗಾವಿ: ಬೋರ್ ವೆಲ್ ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು; ಕೊಳವೆ ಬಾವಿ ಮುಚ್ಚದೆ ಮಾಡಿದ ಎಡವಟ್ಟು 

19/09/2021, 09:10

ಬೆಳಗಾವಿ(reporterkarnataka.com) :  ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ನಡೆದಿದ್ದು, ಮಗುವಿನ ಶವ ಪತ್ತೆಯಾಗಿದೆ.

ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಗು ಶರತ್  15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಅಲಖನೂರ ಗ್ರಾಮದಲ್ಲಿ ನಿನ್ನೆಯ ದಿನ  ಮಗು ಶರತ್ ಕಾಣೆಯಾಗಿದ್ದ. ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಧಾವಿಸಿತ್ತು, ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಜಮೀನಿನಲ್ಲಿ ಬೋರ್ವೆಲ್ ಕೊರೆಸಲಾಗಿತ್ತು, ಆದರೆ ನೀರು ಸಿಗದ ಕಾರಣ ಬೋರ್ವೆಲ್ ಮುಚ್ಚದೆ ಹಾಗೆಯೇ ಬಿಡಲಾಗಿತ್ತು, ಬೋರ್ವೆಲ್ ಮುಚ್ಚದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು