3:11 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಳಗಾವಿ: ಬೋರ್ ವೆಲ್ ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು; ಕೊಳವೆ ಬಾವಿ ಮುಚ್ಚದೆ ಮಾಡಿದ ಎಡವಟ್ಟು 

19/09/2021, 09:10

ಬೆಳಗಾವಿ(reporterkarnataka.com) :  ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ನಡೆದಿದ್ದು, ಮಗುವಿನ ಶವ ಪತ್ತೆಯಾಗಿದೆ.

ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಗು ಶರತ್  15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ತೆಗೆಯಲು ಕಾರ್ಯಾಚರಣೆ ನಡೆಸಲಾಗಿತ್ತು.

ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಅಲಖನೂರ ಗ್ರಾಮದಲ್ಲಿ ನಿನ್ನೆಯ ದಿನ  ಮಗು ಶರತ್ ಕಾಣೆಯಾಗಿದ್ದ. ಹಾಲಪ್ಪ ಎಂಬುವವರ ತೋಟದ ನಿವಾಸದಲ್ಲಿ ಆಡುತ್ತಿದ್ದಾಗ ಬಾಲಕ ಕಾಣೆಯಾಗಿದ್ದನು. ಈ ಕುರಿತು ಹಾರೂಗೇರಿ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ನಂತರ ಹೊಲದಲ್ಲಿ ಬೋರ್ ವೆಲ್ ಬಾಲಕ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ನಂತರ ರಕ್ಷಣಾ ಕಾರ್ಯ ಆರಂಭವಾಗಿದ್ದು, 15 ಅಡಿ ಆಳದಲ್ಲಿ ಸಿಲುಕಿರುವ ಕಂದಮ್ಮನ ರಕ್ಷಣೆಗೆ ಅಗ್ನಿಶಾಮಕ ದಳ, ಎನ್ ಡಿ ಆರ್ ಎಫ್ ಸಿಬ್ಬಂದಿ ಧಾವಿಸಿತ್ತು, ಆದರೆ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಜಮೀನಿನಲ್ಲಿ ಬೋರ್ವೆಲ್ ಕೊರೆಸಲಾಗಿತ್ತು, ಆದರೆ ನೀರು ಸಿಗದ ಕಾರಣ ಬೋರ್ವೆಲ್ ಮುಚ್ಚದೆ ಹಾಗೆಯೇ ಬಿಡಲಾಗಿತ್ತು, ಬೋರ್ವೆಲ್ ಮುಚ್ಚದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು