2:03 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

Belagavi | ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ; ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಎಸಿಎಸ್ ವಿ.ರಶ‍್ಮಿ ಮಹೇಶ ಕಿವಿಮಾತು

16/12/2025, 11:42

ಕಿತ್ತೂರ,ಬೆಳಗಾವಿ(reporterkarnataka.com): ವಿದ್ಯಾರ್ಥಿಗಳು ಪ್ರಶ‍್ನೆಗಳನ್ನು ಕೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಾವುದೇ ಹಿಂಜರಿಕೆ ಇಲ್ಲದೇ ಅನುಮಾನಗಳಿಗೆ ಪ್ರಶ್ನೆಗಳನ್ನು ಕೇಳಿ ತಮ್ಮಲ್ಲಿರುವ ಆತಂಕಗಳನ್ನು ಸರಿಪಡಿಸಿಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಎಸಿಎಸ್ ವಿ ರಶ‍್ಮಿ ಮಹೇಶ್ ಕಿವಿಮಾತು ಹೇಳಿದರು.
ಅವರು ಬೆಳಗಾವಿ ಜಿಲ್ಲೆಯ ಚನ್ನಮ್ಮ ಕಿತ್ತೂರಿನ ಕಿತ್ತೂರ ರಾಣಿ ಚೆನ್ನಮ್ಮ ಸೈನಿಕ ಶಾಲೆಯ 54ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ತಂತ್ರಜ್ಞಾನ ಯುಗದಲ್ಲಿ ನಾವಿದ್ದೇವೆ. ಸಾಕಷ್ಟು ಮಾಹಿತಿಗಳನ್ನು ನಾವು ಅಂತರಜಾಲ್ ದಲ್ಲಿ ಹುಡುಕಾಡಬಹುದು ಅವುಗಳನ್ನು ಯಾವುದು ನಮ್ಮ ಅನುಕೂಲಕ್ಕ ಬರುತ್ತದೆಯೊ ಅದನ್ನು ಮಾತ್ರ ಓದಿಗೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಪೋಷಕರು ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ಅತ್ಯುತ್ತಮ ಶಿಕ್ಷಣ ಪಡೆದುಕೊಂಡು ಉತ್ತಮವಾದ ಬದುಕನ್ನು ಸೃಷ್ಟಿಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಈಗ ಕಲಿಯಲು ಸಾಕಷ್ಟು ಅವಕಾಶಗಳಿಗೆ ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಬದುಕಿನಲ್ಲಿ ಉತ್ತಮವಾದ ಮತ್ತು ದೊಡ್ಡದಾದ ಗುರಿಯನ್ನು ಇಟ್ಟುಕೊಳ್ಳಬೇಕು ಮತ್ತು ಸತತ ಶ್ರಮವಹಿಸಿ ಸಾಧಕರಾಗಬೇಕೆಂದು ನುಡಿದರು.
ಈ ಸಮಾರಂಭದಲ್ಲಿ ಅತ್ಯುತ್ತಮವಾದ ಸಾಧನೆಮಾಡಿದ ಶಿಕ್ಷಕಿಯರಿಗೆ ಮತ್ತು ಸಿಬ್ಬಂದಿವರ್ಗದವರಿಗೆ ಹಾಗೂ ವಿವಿಧ ಕ್ರೀಡೆಗಳಲ್ಲಿ ಪದಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ವೇದಿಕೆಯ ಸಮಾರಂಭದ ಮುಂಚೆ ಸಭೆಗೆ ಆಗಮಿಸಿದ್ದ ಮುಖ್ಯ ಅತಿಥಿಗಳು ಶಾಲಾ ವಿದ್ಯಾರ್ಥಿವೃಂದದಿಂದ ಪಥಸಂಚಲನ ಗೌರವ ವಂದನೆ ಸ್ವೀಕರಿಸಿದರು.


ಪಥಸಂಚನಲದ ನಂತರ ವಿದ್ಯಾರ್ಥೀನಿಯರುಗಳು ವಿವಿಧ ಪ್ರಕಾರದ ಶೌರ್ಯ, ಕಲೆ, ಸಂಸ್ಕೃತಿ, ಮತ್ತು ಯೋಗ, ಮಲ್ಲಕಂಬ ಹೀಗೆ ಹತ್ತು ಹಲವಾರು ಪ್ರದರ್ಶನಗಳನ್ನು ನೀಡಿ ಅತಿಥಿಗಳ ಮತ್ತು ಪಾಲಕರ ಮೆಚ್ಚುಗೆ ಪಡೆದುಕೊಂಡರು.
ಪ್ರಾಚಾರ್ಯರಾದ ಕರ್ನಲ್ ಡಾ.ರಾಹುಲ್ ಶರ್ಮಾ ಸ್ವಾಗತಿಸಿದರು. ಸಂಸ್ಥೆಯ ಅಧ್ಯಕ್ಷ ಎ.ಕೆ.ಕೊಟ್ರಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅರುಣಾ ಅಕ್ಕಿ, ಕಾರ್ಯಾಧ‍್ಯಕ್ಷ ಡಾ.ವಿರೇಂದ್ರ ತೆಗ್ಗಿನಮನೆ, ಸದಸ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಮಹಾಂತೇಶ ಕೌಜಲಗಿ, ಶಿಕ್ಷಣ ಇಲಾಖೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಆಯುಕ್ತೆ ಶಾಲಿನಿ, ಶಾಲೆಯ ಕ್ಯಾಪ್ಟನ್ ಕೆಡೆಟ್ ಅಪೂರ್ವ ಎನ್ ಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು