12:25 PM Sunday27 - April 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಒಂದೇ ದಿನ 430 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ… Belagavi | ಉಗ್ರರ ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕೆಎಸ್ಸಾರ್ಟಿಸಿ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 1 ಕೋಟಿ ಪರಿಹಾರ: ಕಾಲು ಕಳೆದುಕೊಂಡ ಸಿಬ್ಬಂದಿಗೆ… ಮುಖ್ಯಮಂತ್ರಿ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ್… ಕಲ್ಲಡ್ಕ ಕೇಟಿಗೆ 70ರ ಸಂಭ್ರಮ!: ಹಾಲಿನ ಮೇಲೆ ಲೀಲಾಜಾಲವಾಗಿ ತೇಲುವ ಟೀ ಡಿಕಾಕ್ಷನ್… Opposition Leader | ಬೆಲೆಯೇರಿಕೆ ವಿರುದ್ಧ 3 ದಿನಗಳ ಕಾಲ ಹೋರಾಟ: ಪ್ರತಿಪಕ್ಷ… VHP protest | ಕಾಶ್ಮೀರದಲ್ಲಿ ನರಮೇಧ: ಚಿಕ್ಕಮಗಳೂರಿನಲ್ಲಿ ವಿಎಚ್ ಪಿ ಪ್ರತಿಭಟನೆ; ಉಗ್ರರ… Bangalore | ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ಕೆ.… BBMP | ಸಾರ್ವಜನಿಕರಿಂದ ದೂರು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ: ಬಿಬಿಎಂಪಿಗೆ ಲೋಕಾಯುಕ್ತ… Chamarajanagara | ಸಂಪುಟ ಸದಸ್ಯರು ದೇವಾಲಯಕ್ಕೆ: ಸಚಿವ ಮಹದೇವಪ್ಪ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ…

ಇತ್ತೀಚಿನ ಸುದ್ದಿ

Belagavi | ಉಗ್ರರ ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

27/04/2025, 11:13

ಬೆಳಗಾವಿ(reporterkarnataka.com): ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ಅದಕ್ಕೆ ಬೆಂಬಲ ನೀಡಲಾಗುವುದು ಎಂದರು.
ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಉಗ್ರರನ್ನು ಮಟ್ಟಹಾಕುವುದೇ ನಮ್ಮೆಲ್ಲರ ಉದ್ದೇಶವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ವಂಚಿಸುತ್ತಿರುವುದು ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಖುದ್ದು ನಾನೇ ದೂರು ನೀಡಿದ್ದೇನೆ ಎಂದು ಸಚಿವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು