5:49 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬೆಳಗಾವಿ: ಮಗಳ ಮದುವೆ ಮಾಡಿ ಕೊಡದ ಆಕ್ರೋಶ; ಯುವಕನಿಂದ ತಾಯಿ- ಮಗನ ಭೀಕರ ಹತ್ಯೆ

05/12/2024, 22:13

ಸಂತೋಷ್ ಬೆಳಗಾವಿ

info.reporterkarnataka@gmail.com

ಮಗಳನ್ನು ಮದುವೆ ಮಾಡಿಕೊಟ್ಟಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಮನೆಗೆ ನುಗ್ಗಿ ಯುವತಿಯ ತಾಯಿ ಮತ್ತು ಸಹೋದರನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಅಕ್ಕೋಳ ಗ್ರಾಮದ ಮಂಗಳಾ ನಾಯಿಕ (42) ಹಾಗೂ ಪ್ರಜ್ವಲ ನಾಯಿಕ (18) ಕೊಲೆಯಾದ‌ ತಾಯಿ, ಮಗ ಎಂದು ಗುರುತಿಸಲಾಗಿದೆ.
ಆರೋಪಿ ರವಿ ಎಂಬಾತ ತಾಯಿ- ಮಗನ ತಲೆಗೆ
ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ. ನಂತರ ಘಟನೆ ಮಾಹಿತಿ ಪಡೆದ ನಿಪ್ಪಾಣಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಆರೋಪಿ ರವಿಯನ್ನು ವಶಕ್ಕೆ ಪಡೆದಿದ್ದಾರೆ.
*ತಾಯಿ ವಿರೋಧ:*
ಮಗಳನ್ನು ಮದುವೆ ಮಾಡಿಕೊಡುವಂತೆ ಮಂಗಳಾ ನಾಯಿಕ ಅವರನ್ನು ಆರೋಪಿ ರವಿ ಆಗಾಗ ಪೀಡಿಸುತ್ತಿದ್ದ. ಆದರೆ, ಮಗಳನ್ನು ಮದುವೆ ಮಾಡಿ ಕೊಡಲು ಮಂಗಳಾ ಅವರು ಒಪ್ಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರವಿಯು ಈ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಬಚಾವಾದ ಮಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು