3:02 PM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಬೆಳಗಾವಿ: ಮಗಳ ಮದುವೆ ಮಾಡಿ ಕೊಡದ ಆಕ್ರೋಶ; ಯುವಕನಿಂದ ತಾಯಿ- ಮಗನ ಭೀಕರ ಹತ್ಯೆ

05/12/2024, 22:13

ಸಂತೋಷ್ ಬೆಳಗಾವಿ

info.reporterkarnataka@gmail.com

ಮಗಳನ್ನು ಮದುವೆ ಮಾಡಿಕೊಟ್ಟಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಮನೆಗೆ ನುಗ್ಗಿ ಯುವತಿಯ ತಾಯಿ ಮತ್ತು ಸಹೋದರನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.
ಅಕ್ಕೋಳ ಗ್ರಾಮದ ಮಂಗಳಾ ನಾಯಿಕ (42) ಹಾಗೂ ಪ್ರಜ್ವಲ ನಾಯಿಕ (18) ಕೊಲೆಯಾದ‌ ತಾಯಿ, ಮಗ ಎಂದು ಗುರುತಿಸಲಾಗಿದೆ.
ಆರೋಪಿ ರವಿ ಎಂಬಾತ ತಾಯಿ- ಮಗನ ತಲೆಗೆ
ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ. ನಂತರ ಘಟನೆ ಮಾಹಿತಿ ಪಡೆದ ನಿಪ್ಪಾಣಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಆರೋಪಿ ರವಿಯನ್ನು ವಶಕ್ಕೆ ಪಡೆದಿದ್ದಾರೆ.
*ತಾಯಿ ವಿರೋಧ:*
ಮಗಳನ್ನು ಮದುವೆ ಮಾಡಿಕೊಡುವಂತೆ ಮಂಗಳಾ ನಾಯಿಕ ಅವರನ್ನು ಆರೋಪಿ ರವಿ ಆಗಾಗ ಪೀಡಿಸುತ್ತಿದ್ದ. ಆದರೆ, ಮಗಳನ್ನು ಮದುವೆ ಮಾಡಿ ಕೊಡಲು ಮಂಗಳಾ ಅವರು ಒಪ್ಪದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರವಿಯು ಈ ದುಷ್ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಬಚಾವಾದ ಮಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು