9:16 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಬೆಳಗಾವಿ: ಮುಳ್ಳೂರ ಆಯಿಲ್ ಮಿಲ್ ನಲ್ಲಿ ಭಾರಿ ಅಗ್ನಿ ದುರಂತ; 20 ಲಕ್ಷ ರೂ. ಮೌಲ್ಯದ ಶೇಂಗಾ ಎಣ್ಣೆ ನಾಶ

16/03/2022, 18:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com 

ಜಿಲ್ಲೆಯ ರಾಮದುರ್ಗ ಪಟ್ಟಣದ ಗಾಂಧಿನಗರದ ವೆಂಕಟೇಶ್ ಟಾಕೀಸ್ ಹಿಂದುಗಡೆ ಇರುವ ಸಿದ್ದೇಶ್ವರ ಆಯಿಲ್ ಇಂಡಸ್ಟ್ರಿಸ್  ಮುಳ್ಳೂರ ಆಯಿಲ್ ಮಿಲ್ ನಲ್ಲಿ ಬುಧವಾರ  ತಡರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ ಶೇಂಗಾ ಎಣ್ಣೆ ಸುಟ್ಟುಹೋಗಿದೆ.


ತಡರಾತ್ರಿ ಸುಮಾರು 2 ಗಂಟೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಮಿಲಗೆ ಬೆಂಕಿ ಕಾಣಿಸಿಕೊಂಡಿದೆ. ಈ ಆಯಿಲ್ ಮಿಲನಲ್ಲಿ ಶೇಂಗಾ ಎಣ್ಣೆ, ಸೂರ್ಯಪಾನ ಎಸ್ ಎಫ್  ಎಣ್ಣೆ  ತಯಾರಿ ಮಾಡಲಾಗುತ್ತಿತ್ತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಮಿಲಗೆ  ಬೆಂಕಿ ಹತ್ತಿ ಉರಿದಿದೆ.

ಸ್ಥಳಕ್ಕೆ ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ‌ ನಂದಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯನ್ನು ನಂದಿಸಲು 5 ಗಂಟೆಗಳ ಕಾಲ ಬೇಕಾಯಿತು. 

ಸುಮಾರು 18 ರಿಂದ 20 ಲಕ್ಷ ಮೌಲ್ಯದ ಶೇಂಗಾ ಹಾಗೂ ಎಣ್ಣೆ ಸುಟ್ಟು ಭಸ್ಮವಾಗಿದೆ. 

ಬೆಂಕಿ ಕಾಣಿಸಿಕೊಂಡಿದ್ದು ನೋಡಿ ಸಾರ್ವಜನಿಕರು ಮಾಲೀರಿಗೆ  ಕರೆ ಮಾಡಿ ತಿಳಿಸಿದ್ದಾರೆ. 

ಅಗ್ನಿಶಾಮಕ ದಳದ ಅಧಿಕಾರಿಗಳಾದ ಮಂಜುನಾಥ ಕಲಾದಗಿ ಮಾತನಾಡಿ, ರಾತ್ರಿ 3 ಗಂಟೆಗೆ ಆಯಿಲ್ ಮಿಲ್ ನಲ್ಲಿ ಬೆಂಕಿ ಕಾಣಿಸಿ ಕೊಂಡಿರುವ ಸುದ್ದಿ ತಿಳಿತು. ಸುದ್ದಿಯನ್ನು ಕೇಳಿದ ತಕ್ಷಣ ನಾವು ಒಂದು ವಾಹನ ತೆಗೆದುಕೊಂಡು ಸ್ಥಳಕ್ಕೆ ಹೋದೆವು. ಅಲ್ಲಿ ಬೆಂಕಿ ಅತಿ ಹೆಚ್ಚು ಇತ್ತು. ನಂತರ ನಾವು ಇನ್ನೊಂದು ನಮ್ಮ ಅಗ್ನಿ ಜಲವಾಹನ ತಂದು 2 ವಾಹನದಿಂದ ಸತತವಾಗಿ 5 ರಿಂದ 6 ಗಂಟೆ ಕಾರ್ಯಾಚರಣೆ ನಡೆಸಿ 6 ರಿಂದ 8 ಸಲಾ ನೀರನ್ನು ತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದೇವೆ ಎಂದು ಹೇಳಿದರು. 


ಶ್ರೀ ಸಿದ್ದೇಶ್ವರ ಆಯಿಲ್ ಇಂಡಸ್ಟ್ರಿಜ್  ಮುಳ್ಳೂರ ಆಯಿಲ್ ಮಿಲ್ ಮಾಲಿಕರಾದ ಸಿದ್ದು ಮಲ್ಲಿಕಾರ್ಜುನ್  ಮುಳ್ಳೂರ ಅವರು ಮಾತನಾಡಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿದ್ದು ಸುಮಾರು 500 ಚಿಲ್  ಶೇಂಗಾ,  200 ಚಿಲ್ ಶೆಂಗಾ ಕಾಳೂ ಮತ್ತು ಎಣ್ಣೆ ಕೂಡಾ ಇತ್ತು ಸುಮಾರು 18 ರಿಂದ 20 ಲಕ್ಷ  ರೂಪಾಯಿ ವರಿಗೂ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು