3:53 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

23/07/2021, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ‌ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ.

ಪ್ರವಾಹದಿಂದ ಜನರು ದಿಕ್ಕೆಟ್ಟು ಹೋಗಿದ್ದಾರೆ. ನದಿ ಮತ್ತು ರಸ್ತೆಯ ವ್ಯತ್ಯಾಸ ಕಾಣುತ್ತಿಲ್ಲ. ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರು ನದಿಯಲ್ಲಿ ಪ್ರವಾಹ ಇಳಿಯಲು ಕಾಯುತ್ತಿದ್ದಾರೆ.

ಪ್ರಯಾಣಿಕರಿಗೆ ದಿಕ್ಕು ತೋಚದಂತೆ  ರಸ್ತೆ ಮೇಲೆ ನೀರು ಹರಿದು ಬಂದು ಇದು ನದಿನಾ ಅಥವಾ ರಸ್ತೆ ನಾ ಅಂತಾ ತಿಳಿಯದೇ ತಮ್ಮ ತಮ್ಮ ಸಣ್ಣ ವಾಹಾನಗಳು ರಸ್ತೆ ಬದಿಗೆ ನೀಲಿಸಿ ನೀರಿನ ರಭಸ ಕಡಿಮೇ ಆಗುವ ನೀರಿಕ್ಷೆಯಲ್ಲಿ‌ ಕಾದುಕೊಳ್ಳಿತ್ತಿದ್ದಾರೆ,

ಇನ್ನೂ ಲಾರಿ ಚಾಲಕರು ಭಾರ ಹೆಚ್ಚಿರುವುದರಿಂದ ನೀರಿನ ಮೇಲೆಯೇ ಸವಾರಿ ಮಾಡುತ್ತಿದ್ದಾರೆ. ಇಲ್ಲಿ ನೀರು ಹರಿದು‌ ಹೋಗಲು ಸರಾಗ ಮಾರ್ಗ ಇಲ್ಲದ ಕಾರಣ ರಸ್ತೆ ಮೇಲೆ ನೀರು ನುಗ್ಗಿ ಪ್ರತಿ ವರ್ಷ ವು ಮಳೆಗಾಲದಲ್ಲಿ‌ ಇಂಥಹ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು‌ ವಾಹನ ಶುಲ್ಕ ಭರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಆಗುವ ಸಂಭವಗಳ ಬಗ್ಗೆ ‌ಗಮನ ಹರಿಸುವುದಿಲ್ಲ. ಕೇವಲ ಹಣ ಮಾಡಲು ಮಾತ್ರ ಈ ಹೆದ್ದಾರಿ ಸೀಮಿತವಾಗಿದೆ ಅಂತಾ ಹೇಳಿದರು‌ ತಪ್ಪೆನಿಲ್ಲ. ಇನ್ನಾದರೂ ಎಚ್ಚತ್ತುಕೊಂಡು‌ ಇಂತಹ ಸಮಸ್ಯೆಗಳನ್ನು ಆಲಿಸಿ ರಸ್ತೆ ಸಂಚಾರಕ್ಕೆ ಸುಗಮಗೊಳಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು