5:18 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

23/07/2021, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ‌ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ.

ಪ್ರವಾಹದಿಂದ ಜನರು ದಿಕ್ಕೆಟ್ಟು ಹೋಗಿದ್ದಾರೆ. ನದಿ ಮತ್ತು ರಸ್ತೆಯ ವ್ಯತ್ಯಾಸ ಕಾಣುತ್ತಿಲ್ಲ. ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರು ನದಿಯಲ್ಲಿ ಪ್ರವಾಹ ಇಳಿಯಲು ಕಾಯುತ್ತಿದ್ದಾರೆ.

ಪ್ರಯಾಣಿಕರಿಗೆ ದಿಕ್ಕು ತೋಚದಂತೆ  ರಸ್ತೆ ಮೇಲೆ ನೀರು ಹರಿದು ಬಂದು ಇದು ನದಿನಾ ಅಥವಾ ರಸ್ತೆ ನಾ ಅಂತಾ ತಿಳಿಯದೇ ತಮ್ಮ ತಮ್ಮ ಸಣ್ಣ ವಾಹಾನಗಳು ರಸ್ತೆ ಬದಿಗೆ ನೀಲಿಸಿ ನೀರಿನ ರಭಸ ಕಡಿಮೇ ಆಗುವ ನೀರಿಕ್ಷೆಯಲ್ಲಿ‌ ಕಾದುಕೊಳ್ಳಿತ್ತಿದ್ದಾರೆ,

ಇನ್ನೂ ಲಾರಿ ಚಾಲಕರು ಭಾರ ಹೆಚ್ಚಿರುವುದರಿಂದ ನೀರಿನ ಮೇಲೆಯೇ ಸವಾರಿ ಮಾಡುತ್ತಿದ್ದಾರೆ. ಇಲ್ಲಿ ನೀರು ಹರಿದು‌ ಹೋಗಲು ಸರಾಗ ಮಾರ್ಗ ಇಲ್ಲದ ಕಾರಣ ರಸ್ತೆ ಮೇಲೆ ನೀರು ನುಗ್ಗಿ ಪ್ರತಿ ವರ್ಷ ವು ಮಳೆಗಾಲದಲ್ಲಿ‌ ಇಂಥಹ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು‌ ವಾಹನ ಶುಲ್ಕ ಭರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಆಗುವ ಸಂಭವಗಳ ಬಗ್ಗೆ ‌ಗಮನ ಹರಿಸುವುದಿಲ್ಲ. ಕೇವಲ ಹಣ ಮಾಡಲು ಮಾತ್ರ ಈ ಹೆದ್ದಾರಿ ಸೀಮಿತವಾಗಿದೆ ಅಂತಾ ಹೇಳಿದರು‌ ತಪ್ಪೆನಿಲ್ಲ. ಇನ್ನಾದರೂ ಎಚ್ಚತ್ತುಕೊಂಡು‌ ಇಂತಹ ಸಮಸ್ಯೆಗಳನ್ನು ಆಲಿಸಿ ರಸ್ತೆ ಸಂಚಾರಕ್ಕೆ ಸುಗಮಗೊಳಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು