8:38 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ ಜಯ ಎಂದ ಉಮೇಶ ಕೆ. ಮುದ್ನಾಳ

29/06/2024, 21:09

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕಳೆದ ಎರಡು ವರ್ಷಗಳ ಧಾರಾಕಾರ ಸುರಿದ ಮಳೆಗೆ ಇನ್ನಷ್ಟು ಕೊಚ್ಚಿಕೊಂಡು ಹೋದ ಸೇತುವೆ ನಿರ್ಮಾಣಕ್ಕೆ ಭತ್ತ ನಾಟಿ ಮಾಡುವ ಮುಖಾಂತರ ವಿನೂತನ ಪ್ರತಿಭಟನೆ ನಡೆಸಿದ್ದಕ್ಕೆ ಇದೀಗ 1ಕೋಟಿ 80 ಲಕ್ಷ ರೂ. ಗಳ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ.


ಈ ಕುರಿತು ಸ್ಥಳಕ್ಕೆ ಭೇಟ ನೀಡಿ ಸೇತುವೆ ನಿರ್ಮಾಣವಾಗಿದ್ದನ್ನು ಮನಗಂಡ ನಂತರ ಹೇಳಿಕೆ ನೀಡಿದ ಅವರು, ಕಳೆದ ವರ್ಷ ಮಹಿಳೆಯರು ಹಾಗೂ ರೈತರು ಸೇರಿಕೊಂಡು ಬತ್ತದ ನಾಟಿಯನ್ನು ಹಾಡು ಹಾಡುವ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಇದಾದ ನಂತರ ಸೇತುವೆ ಹಾಗೂ ರಸ್ತೆ ಸುಮಾರು 1.80 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಿದೆ. ಈ ಸೇತುವೆಯಿಂದ ಕೇವಲ ಮುಂಡರಗಿ-ಬೆಳಗೇರಿ ಅಲ್ಲದೇ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಬಸ್ ಸಂಚಾರ ಬಂದಾಗಿತ್ತು. ಈದೀಗ ಬಸ್ ಸಂಚಾರವೂ ಆರಂಭವಾಗಲಿದೆ ಎಂದು ಅವರು ತಿಳಿಸಿದರು.


ಜೊತೆಗೆ ಸ್ಥಳದಲ್ಲಿಯೇ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದಾಗ ಶಾಸಕರು ಸಧ್ಯ ತಾತ್ಕಾಲಿಕವಾಗಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನಬಾರ್ಡ, ಕೆಕೆಆರ್‌ಡಿಬಿ ಇಲ್ಲವೇ ತಮ್ಮ ಶಾಸಕರ ಅನುದಾನದಲ್ಲಿ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅದರಂತೆ ಈದೀಗ ಸೇತುವೆ ನಿರ್ಮಾಣವಾಗಿರುವುದು ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದರು. ಈದೀಗ ಶಾಸಕರು ಸಮಯ ನಿಗದಿಪಡಿಸಿ ಒಂದು ವಾರದಲ್ಲಿಯೇ ಸೇತುವೆ ಉದ್ಘಾಟನೆ ನೆರವೇರಿಸುವಂತೆ ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.
ಈ ವೇಳೆ ಬೆಳಗೇರಾ ಗ್ರಾಮಸ್ಥರಾದ ಆಂಜಿನೇಯ ನಾಯ್ಕೋಡಿ, ರಫೀಕ್ ಪಟೇಲ್, ಬಾಬುಖಾನ್, ಈರಪ್ಪ, ನಿಂಗಪ್ಪ ಮೋನಪ್ಪ ಸೇರಿ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು