12:04 AM Saturday10 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ ಜಯ ಎಂದ ಉಮೇಶ ಕೆ. ಮುದ್ನಾಳ

29/06/2024, 21:09

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕಳೆದ ಎರಡು ವರ್ಷಗಳ ಧಾರಾಕಾರ ಸುರಿದ ಮಳೆಗೆ ಇನ್ನಷ್ಟು ಕೊಚ್ಚಿಕೊಂಡು ಹೋದ ಸೇತುವೆ ನಿರ್ಮಾಣಕ್ಕೆ ಭತ್ತ ನಾಟಿ ಮಾಡುವ ಮುಖಾಂತರ ವಿನೂತನ ಪ್ರತಿಭಟನೆ ನಡೆಸಿದ್ದಕ್ಕೆ ಇದೀಗ 1ಕೋಟಿ 80 ಲಕ್ಷ ರೂ. ಗಳ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ.


ಈ ಕುರಿತು ಸ್ಥಳಕ್ಕೆ ಭೇಟ ನೀಡಿ ಸೇತುವೆ ನಿರ್ಮಾಣವಾಗಿದ್ದನ್ನು ಮನಗಂಡ ನಂತರ ಹೇಳಿಕೆ ನೀಡಿದ ಅವರು, ಕಳೆದ ವರ್ಷ ಮಹಿಳೆಯರು ಹಾಗೂ ರೈತರು ಸೇರಿಕೊಂಡು ಬತ್ತದ ನಾಟಿಯನ್ನು ಹಾಡು ಹಾಡುವ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಇದಾದ ನಂತರ ಸೇತುವೆ ಹಾಗೂ ರಸ್ತೆ ಸುಮಾರು 1.80 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಿದೆ. ಈ ಸೇತುವೆಯಿಂದ ಕೇವಲ ಮುಂಡರಗಿ-ಬೆಳಗೇರಿ ಅಲ್ಲದೇ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಬಸ್ ಸಂಚಾರ ಬಂದಾಗಿತ್ತು. ಈದೀಗ ಬಸ್ ಸಂಚಾರವೂ ಆರಂಭವಾಗಲಿದೆ ಎಂದು ಅವರು ತಿಳಿಸಿದರು.


ಜೊತೆಗೆ ಸ್ಥಳದಲ್ಲಿಯೇ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದಾಗ ಶಾಸಕರು ಸಧ್ಯ ತಾತ್ಕಾಲಿಕವಾಗಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನಬಾರ್ಡ, ಕೆಕೆಆರ್‌ಡಿಬಿ ಇಲ್ಲವೇ ತಮ್ಮ ಶಾಸಕರ ಅನುದಾನದಲ್ಲಿ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅದರಂತೆ ಈದೀಗ ಸೇತುವೆ ನಿರ್ಮಾಣವಾಗಿರುವುದು ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದರು. ಈದೀಗ ಶಾಸಕರು ಸಮಯ ನಿಗದಿಪಡಿಸಿ ಒಂದು ವಾರದಲ್ಲಿಯೇ ಸೇತುವೆ ಉದ್ಘಾಟನೆ ನೆರವೇರಿಸುವಂತೆ ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.
ಈ ವೇಳೆ ಬೆಳಗೇರಾ ಗ್ರಾಮಸ್ಥರಾದ ಆಂಜಿನೇಯ ನಾಯ್ಕೋಡಿ, ರಫೀಕ್ ಪಟೇಲ್, ಬಾಬುಖಾನ್, ಈರಪ್ಪ, ನಿಂಗಪ್ಪ ಮೋನಪ್ಪ ಸೇರಿ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು