5:16 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ ಜಯ ಎಂದ ಉಮೇಶ ಕೆ. ಮುದ್ನಾಳ

29/06/2024, 21:09

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕಳೆದ ಎರಡು ವರ್ಷಗಳ ಧಾರಾಕಾರ ಸುರಿದ ಮಳೆಗೆ ಇನ್ನಷ್ಟು ಕೊಚ್ಚಿಕೊಂಡು ಹೋದ ಸೇತುವೆ ನಿರ್ಮಾಣಕ್ಕೆ ಭತ್ತ ನಾಟಿ ಮಾಡುವ ಮುಖಾಂತರ ವಿನೂತನ ಪ್ರತಿಭಟನೆ ನಡೆಸಿದ್ದಕ್ಕೆ ಇದೀಗ 1ಕೋಟಿ 80 ಲಕ್ಷ ರೂ. ಗಳ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ.


ಈ ಕುರಿತು ಸ್ಥಳಕ್ಕೆ ಭೇಟ ನೀಡಿ ಸೇತುವೆ ನಿರ್ಮಾಣವಾಗಿದ್ದನ್ನು ಮನಗಂಡ ನಂತರ ಹೇಳಿಕೆ ನೀಡಿದ ಅವರು, ಕಳೆದ ವರ್ಷ ಮಹಿಳೆಯರು ಹಾಗೂ ರೈತರು ಸೇರಿಕೊಂಡು ಬತ್ತದ ನಾಟಿಯನ್ನು ಹಾಡು ಹಾಡುವ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಇದಾದ ನಂತರ ಸೇತುವೆ ಹಾಗೂ ರಸ್ತೆ ಸುಮಾರು 1.80 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಿದೆ. ಈ ಸೇತುವೆಯಿಂದ ಕೇವಲ ಮುಂಡರಗಿ-ಬೆಳಗೇರಿ ಅಲ್ಲದೇ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಬಸ್ ಸಂಚಾರ ಬಂದಾಗಿತ್ತು. ಈದೀಗ ಬಸ್ ಸಂಚಾರವೂ ಆರಂಭವಾಗಲಿದೆ ಎಂದು ಅವರು ತಿಳಿಸಿದರು.


ಜೊತೆಗೆ ಸ್ಥಳದಲ್ಲಿಯೇ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದಾಗ ಶಾಸಕರು ಸಧ್ಯ ತಾತ್ಕಾಲಿಕವಾಗಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನಬಾರ್ಡ, ಕೆಕೆಆರ್‌ಡಿಬಿ ಇಲ್ಲವೇ ತಮ್ಮ ಶಾಸಕರ ಅನುದಾನದಲ್ಲಿ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅದರಂತೆ ಈದೀಗ ಸೇತುವೆ ನಿರ್ಮಾಣವಾಗಿರುವುದು ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದರು. ಈದೀಗ ಶಾಸಕರು ಸಮಯ ನಿಗದಿಪಡಿಸಿ ಒಂದು ವಾರದಲ್ಲಿಯೇ ಸೇತುವೆ ಉದ್ಘಾಟನೆ ನೆರವೇರಿಸುವಂತೆ ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.
ಈ ವೇಳೆ ಬೆಳಗೇರಾ ಗ್ರಾಮಸ್ಥರಾದ ಆಂಜಿನೇಯ ನಾಯ್ಕೋಡಿ, ರಫೀಕ್ ಪಟೇಲ್, ಬಾಬುಖಾನ್, ಈರಪ್ಪ, ನಿಂಗಪ್ಪ ಮೋನಪ್ಪ ಸೇರಿ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು