10:22 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ ಜಯ ಎಂದ ಉಮೇಶ ಕೆ. ಮುದ್ನಾಳ

29/06/2024, 21:09

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕಳೆದ ಎರಡು ವರ್ಷಗಳ ಧಾರಾಕಾರ ಸುರಿದ ಮಳೆಗೆ ಇನ್ನಷ್ಟು ಕೊಚ್ಚಿಕೊಂಡು ಹೋದ ಸೇತುವೆ ನಿರ್ಮಾಣಕ್ಕೆ ಭತ್ತ ನಾಟಿ ಮಾಡುವ ಮುಖಾಂತರ ವಿನೂತನ ಪ್ರತಿಭಟನೆ ನಡೆಸಿದ್ದಕ್ಕೆ ಇದೀಗ 1ಕೋಟಿ 80 ಲಕ್ಷ ರೂ. ಗಳ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ.


ಈ ಕುರಿತು ಸ್ಥಳಕ್ಕೆ ಭೇಟ ನೀಡಿ ಸೇತುವೆ ನಿರ್ಮಾಣವಾಗಿದ್ದನ್ನು ಮನಗಂಡ ನಂತರ ಹೇಳಿಕೆ ನೀಡಿದ ಅವರು, ಕಳೆದ ವರ್ಷ ಮಹಿಳೆಯರು ಹಾಗೂ ರೈತರು ಸೇರಿಕೊಂಡು ಬತ್ತದ ನಾಟಿಯನ್ನು ಹಾಡು ಹಾಡುವ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಇದಾದ ನಂತರ ಸೇತುವೆ ಹಾಗೂ ರಸ್ತೆ ಸುಮಾರು 1.80 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಿದೆ. ಈ ಸೇತುವೆಯಿಂದ ಕೇವಲ ಮುಂಡರಗಿ-ಬೆಳಗೇರಿ ಅಲ್ಲದೇ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಬಸ್ ಸಂಚಾರ ಬಂದಾಗಿತ್ತು. ಈದೀಗ ಬಸ್ ಸಂಚಾರವೂ ಆರಂಭವಾಗಲಿದೆ ಎಂದು ಅವರು ತಿಳಿಸಿದರು.


ಜೊತೆಗೆ ಸ್ಥಳದಲ್ಲಿಯೇ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದಾಗ ಶಾಸಕರು ಸಧ್ಯ ತಾತ್ಕಾಲಿಕವಾಗಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನಬಾರ್ಡ, ಕೆಕೆಆರ್‌ಡಿಬಿ ಇಲ್ಲವೇ ತಮ್ಮ ಶಾಸಕರ ಅನುದಾನದಲ್ಲಿ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅದರಂತೆ ಈದೀಗ ಸೇತುವೆ ನಿರ್ಮಾಣವಾಗಿರುವುದು ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದರು. ಈದೀಗ ಶಾಸಕರು ಸಮಯ ನಿಗದಿಪಡಿಸಿ ಒಂದು ವಾರದಲ್ಲಿಯೇ ಸೇತುವೆ ಉದ್ಘಾಟನೆ ನೆರವೇರಿಸುವಂತೆ ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.
ಈ ವೇಳೆ ಬೆಳಗೇರಾ ಗ್ರಾಮಸ್ಥರಾದ ಆಂಜಿನೇಯ ನಾಯ್ಕೋಡಿ, ರಫೀಕ್ ಪಟೇಲ್, ಬಾಬುಖಾನ್, ಈರಪ್ಪ, ನಿಂಗಪ್ಪ ಮೋನಪ್ಪ ಸೇರಿ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು