8:13 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

1.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಳಗೇರಾ ಸೇತುವೆ ಸಂಚಾರಕ್ಕೆ ರೆಡಿ: ಹೋರಾಟಕ್ಕೆ ಸಂದ ಜಯ ಎಂದ ಉಮೇಶ ಕೆ. ಮುದ್ನಾಳ

29/06/2024, 21:09

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಕಳೆದ ಎರಡು ವರ್ಷಗಳ ಧಾರಾಕಾರ ಸುರಿದ ಮಳೆಗೆ ಇನ್ನಷ್ಟು ಕೊಚ್ಚಿಕೊಂಡು ಹೋದ ಸೇತುವೆ ನಿರ್ಮಾಣಕ್ಕೆ ಭತ್ತ ನಾಟಿ ಮಾಡುವ ಮುಖಾಂತರ ವಿನೂತನ ಪ್ರತಿಭಟನೆ ನಡೆಸಿದ್ದಕ್ಕೆ ಇದೀಗ 1ಕೋಟಿ 80 ಲಕ್ಷ ರೂ. ಗಳ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ ಎಂದು ಸಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ತಿಳಿಸಿದ್ದಾರೆ.


ಈ ಕುರಿತು ಸ್ಥಳಕ್ಕೆ ಭೇಟ ನೀಡಿ ಸೇತುವೆ ನಿರ್ಮಾಣವಾಗಿದ್ದನ್ನು ಮನಗಂಡ ನಂತರ ಹೇಳಿಕೆ ನೀಡಿದ ಅವರು, ಕಳೆದ ವರ್ಷ ಮಹಿಳೆಯರು ಹಾಗೂ ರೈತರು ಸೇರಿಕೊಂಡು ಬತ್ತದ ನಾಟಿಯನ್ನು ಹಾಡು ಹಾಡುವ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಇದಾದ ನಂತರ ಸೇತುವೆ ಹಾಗೂ ರಸ್ತೆ ಸುಮಾರು 1.80 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗಿದೆ. ಈ ಸೇತುವೆಯಿಂದ ಕೇವಲ ಮುಂಡರಗಿ-ಬೆಳಗೇರಿ ಅಲ್ಲದೇ ಸುತ್ತಮುತ್ತಲ ಹತ್ತಾರು ಹಳ್ಳಿಗಳಿಗೆ ಅನುಕೂಲವಾಗಲಿದೆ. ಇದರ ಜೊತೆಗೆ ಬಸ್ ಸಂಚಾರ ಬಂದಾಗಿತ್ತು. ಈದೀಗ ಬಸ್ ಸಂಚಾರವೂ ಆರಂಭವಾಗಲಿದೆ ಎಂದು ಅವರು ತಿಳಿಸಿದರು.


ಜೊತೆಗೆ ಸ್ಥಳದಲ್ಲಿಯೇ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದಾಗ ಶಾಸಕರು ಸಧ್ಯ ತಾತ್ಕಾಲಿಕವಾಗಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ನಬಾರ್ಡ, ಕೆಕೆಆರ್‌ಡಿಬಿ ಇಲ್ಲವೇ ತಮ್ಮ ಶಾಸಕರ ಅನುದಾನದಲ್ಲಿ ಸೇತುವೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅದರಂತೆ ಈದೀಗ ಸೇತುವೆ ನಿರ್ಮಾಣವಾಗಿರುವುದು ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದರು. ಈದೀಗ ಶಾಸಕರು ಸಮಯ ನಿಗದಿಪಡಿಸಿ ಒಂದು ವಾರದಲ್ಲಿಯೇ ಸೇತುವೆ ಉದ್ಘಾಟನೆ ನೆರವೇರಿಸುವಂತೆ ಒತ್ತಾಯ ಮಾಡುವುದಾಗಿ ತಿಳಿಸಿದ್ದಾರೆ.
ಈ ವೇಳೆ ಬೆಳಗೇರಾ ಗ್ರಾಮಸ್ಥರಾದ ಆಂಜಿನೇಯ ನಾಯ್ಕೋಡಿ, ರಫೀಕ್ ಪಟೇಲ್, ಬಾಬುಖಾನ್, ಈರಪ್ಪ, ನಿಂಗಪ್ಪ ಮೋನಪ್ಪ ಸೇರಿ ಅನೇಕರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು