2:24 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಬೆಳೆ ನಷ್ಟ: ರೈತರನ್ನು ಕಚೇರಿಗೆ ಅಲೆದಾಡಿಸದೆ ತಂತ್ರಾಂಶದಲ್ಲಿ ವರದಿ ಅಳವಡಿಸುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ

28/11/2021, 09:43

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ರೈತರನ್ನು ಕಚೇರಿಗೆ ಅಲೆದಾಡಿಸದೆ ಹಾಗೂ ಬೆಳೆ ನಷ್ಟ ಪರಿಹಾರ ಅರ್ಜಿಗಳನ್ನು ಸ್ವೀಕರಿಸದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವರದಿಯನ್ನು ಡಿ. 29ರ ಒಳಗೆ ತಂತ್ರಾಂಶದಲ್ಲಿ ಅಳವಡಿಸುವಂತೆ ತಹಶಿಲ್ದಾರ್ ಎನ್.ರಘುಮೂರ್ತಿ ತಾಕೀತು ಮಾಡಿದರು.

ನಗರದ ತಾಲೂಕು ಕಚೇರಿಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಅಧಿಕಾರಿಗಳಿಗೆ ಆಯೋಜಿಸಿದ್ದ ಬೆಳೆ ನಷ್ಟ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಳೆದ 15 ದಿನಗಳಿಂದ ವಾಯುಭಾರ ಕುಸಿತದಿಂದ ಸುರಿದ ಅಕಾಲಿಕ ಮಳೆಗೆ ತಾಲೂಕಿನಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಶೇಂಗಾ, 1200 ಹೆಕ್ಟೇರ್ ಕಡಲೆ, 8900 ಹೆಕ್ಟೇರ್ ಈರುಳ್ಳಿ, 770 ಹೆಕ್ಟೇರ್ ದಾಳಿಂಬೆ ಪಪ್ಪಾಯಿ ಬೆಳೆ ನಷ್ಟವಾಗಿದ್ದು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರೈತರು ಈಗಾಲೆ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದು ಅನಾವಶ್ಯಕವಾಗಿ ಅರ್ಜಿಗಳನ್ನು ಪಡೆಯುವುದು , ಕಚೇರಿಗೆ ಅಲೆದಾಡಿಸದೆ ಈಗಾಗಲೆ  ನಷ್ಟವಾದ ವರದಿಯನ್ನು ಶನಿವಾರ, ಭಾನುವಾರ ರಜೆ ದಿನಗಳನ್ನು ಲೆಕ್ಕಿಸದೆ ಕಚೇರಿಯಲ್ಲಿ ಕುಳಿತು ಬೆಳೆ ಪರಿಯಾರ ತಂತ್ರಾಂಶದಲ್ಲಿ ರೈತರ ಬ್ಯಾಂಕ್ ಖಾತೆ ಸೇರಿದಂತೆ ಎಲ್ಲಾ ಮಾಹಿತಿ ಇದ್ದು ಅದನ್ನು ತಂತ್ರಾಂಶದಲ್ಲಿ ಅಳವಿಡಿಸಿ ರೈತರ ಖಾತೆಗೆ ನೇರವಾಗಿ ಬೆಳೆ ಪರಿಹಾರದ ಹಣ ಜಮ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ  ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ.ವಿರುಪಾಕ್ಷಪ್ಪ, ಕಂದಾಯ ನಿರೀಕ್ಷಕ ಲಿಂಗೇಗೌಡ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು