6:15 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಬೆಳೆ ನಷ್ಟ: ರೈತರನ್ನು ಕಚೇರಿಗೆ ಅಲೆದಾಡಿಸದೆ ತಂತ್ರಾಂಶದಲ್ಲಿ ವರದಿ ಅಳವಡಿಸುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ

28/11/2021, 09:43

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ರೈತರನ್ನು ಕಚೇರಿಗೆ ಅಲೆದಾಡಿಸದೆ ಹಾಗೂ ಬೆಳೆ ನಷ್ಟ ಪರಿಹಾರ ಅರ್ಜಿಗಳನ್ನು ಸ್ವೀಕರಿಸದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವರದಿಯನ್ನು ಡಿ. 29ರ ಒಳಗೆ ತಂತ್ರಾಂಶದಲ್ಲಿ ಅಳವಡಿಸುವಂತೆ ತಹಶಿಲ್ದಾರ್ ಎನ್.ರಘುಮೂರ್ತಿ ತಾಕೀತು ಮಾಡಿದರು.

ನಗರದ ತಾಲೂಕು ಕಚೇರಿಯಲ್ಲಿ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಅಧಿಕಾರಿಗಳಿಗೆ ಆಯೋಜಿಸಿದ್ದ ಬೆಳೆ ನಷ್ಟ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕಳೆದ 15 ದಿನಗಳಿಂದ ವಾಯುಭಾರ ಕುಸಿತದಿಂದ ಸುರಿದ ಅಕಾಲಿಕ ಮಳೆಗೆ ತಾಲೂಕಿನಲ್ಲಿ ಸುಮಾರು 40 ಸಾವಿರ ಹೆಕ್ಟೇರ್ ಶೇಂಗಾ, 1200 ಹೆಕ್ಟೇರ್ ಕಡಲೆ, 8900 ಹೆಕ್ಟೇರ್ ಈರುಳ್ಳಿ, 770 ಹೆಕ್ಟೇರ್ ದಾಳಿಂಬೆ ಪಪ್ಪಾಯಿ ಬೆಳೆ ನಷ್ಟವಾಗಿದ್ದು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರೈತರು ಈಗಾಲೆ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದು ಅನಾವಶ್ಯಕವಾಗಿ ಅರ್ಜಿಗಳನ್ನು ಪಡೆಯುವುದು , ಕಚೇರಿಗೆ ಅಲೆದಾಡಿಸದೆ ಈಗಾಗಲೆ  ನಷ್ಟವಾದ ವರದಿಯನ್ನು ಶನಿವಾರ, ಭಾನುವಾರ ರಜೆ ದಿನಗಳನ್ನು ಲೆಕ್ಕಿಸದೆ ಕಚೇರಿಯಲ್ಲಿ ಕುಳಿತು ಬೆಳೆ ಪರಿಯಾರ ತಂತ್ರಾಂಶದಲ್ಲಿ ರೈತರ ಬ್ಯಾಂಕ್ ಖಾತೆ ಸೇರಿದಂತೆ ಎಲ್ಲಾ ಮಾಹಿತಿ ಇದ್ದು ಅದನ್ನು ತಂತ್ರಾಂಶದಲ್ಲಿ ಅಳವಿಡಿಸಿ ರೈತರ ಖಾತೆಗೆ ನೇರವಾಗಿ ಬೆಳೆ ಪರಿಹಾರದ ಹಣ ಜಮ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ  ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ.ವಿರುಪಾಕ್ಷಪ್ಪ, ಕಂದಾಯ ನಿರೀಕ್ಷಕ ಲಿಂಗೇಗೌಡ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು