10:11 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಬೆಲೆಯೇರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ: ಶಾಸಕ ಡಾ. ಭರತ್ ಶೆಟ್ಟಿ ಸಹಿತ ಹಲವರ ಬಂಧನ

05/07/2024, 21:34

ಸಿದ್ದರಾಮಯ್ಯರದ್ದು ಸ್ಕ್ಯಾಮ್ ಸರ್ಕಾರ : ಡಾ. ಭರತ್ ಶೆಟ್ಟಿ ಲೇವಡಿ

ಗುರುಪುರ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸ್ಕ್ಯಾಮ್‌ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ಹೇಳುತ್ತ ಹೋದರೆ ದಿನಕ್ಕೊಂದು ಪ್ರತಿಭಟನೆ ನಡೆಸಬಹುದು. ಹಾಲು, ಪೆಟ್ರೋಲ್, ಡೀಸೆಲ್, ಮುದ್ರಾಂಕ ದರ, ಆಲ್ಕೋಹಾಲ್ ಬೆಲೆ ಏರಿಸಿರುವ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರನ್ನು ನರಕದ ಕೂಪಕ್ಕೆ ಇಳಿಸುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದರು.
ಗುರುಪುರ ಕೈಕಂಬ ಜಂಕ್ಷನ್‌ನಲ್ಲಿ ಜು. 5ರಂದು ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾವು ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಆಯೋಜಿಸಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ರೈತ ವಿರೋಧಿಯಾಗಿರುವ ಸಿದ್ದರಾಮಯ್ಯ ಸರ್ಕಾರ ರಸಗೊಬ್ಬರ ಮತ್ತು ಕೃಷಿ ಬೀಜದ ಬೆಲೆ ಏರಿಸಿದೆ. ಗ್ಯಾರಂಟಿಗಾಗಿ ಕಾಂಗ್ರೆಸ್ ಭ್ರಷ್ಟಾಚಾರದ ಮಾರ್ಗ ಹಿಡಿದಿದೆ. ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ ಎಂದರು.


ಮoಗಳೂರು ನಗರ ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮೂಲಕ ಜನರ ರಕ್ತ ಕುಡಿಯುತ್ತಿದೆ. ಅಧಿಕಾರ ತ್ಯಜಿಸುವುಕ್ಕಿಂತ ಮುಂಚೆ ಸಾಕಷ್ಟು ಸೈಟು ಮಾಡುವ ಗುರಿ ಇಟ್ಟುಕೊಂಡಿರುವ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಶೀಘ್ರ ಜನರು ಉತ್ತರ ಕೊಡಲಿದ್ದಾರೆ ಎಂದರು.
ಬಿಜೆಪಿ ನಾಯಕಿ ಅಮೃತಲಾಲ್ ಡಿ’ಸೋಜ ಮಾತನಾಡಿ, ಹಾಲಿನ ದರ ಏರಿಸಿ ಮಹಿಳೆಯರ ಪಾಲಿಗೆ ವಿಲನ್ ಆಗಿರುವ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ವಿಷಯದಲ್ಲಿ ಮೌನವಾಗಿದೆ ಎಂದರು.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಮುಖಂಡರಾದ ಉಪಮೇಯರ್ ಸುನೀತಾ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಣದೀಪ್ ಕಾಂಚನ್, ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ, ಪ್ರಧಾನ ಕಾರ್ಯದರ್ಶಿಗಳಾದ ಪವಿತ್ರಾ, ಸ್ವಪ್ನಾ, ಉಪಾಧ್ಯಕ್ಷರಾದ ಆನಂದ ಪಾಂಗಳ, ಸೋಹನ್ ಅತಿಕಾರಿ, ಮಹಾಶಕ್ತಿ ಕೇಂದ್ರ ಪ್ರಮುಖರಾದ ಶೋಧನ್ ಆದ್ಯಪಾಡಿ, ತಮ್ಮಯ್ಯ ಪೂಜಾರಿ, ವಿವಿಧ ಪಂಚಾಯತ್‌ಗಳ ಬಿಜೆಪಿ ಬೆಂಬಲಿದ ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು