9:54 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ ವಿಫಲಗೊಳಿಸಲು  ಷಡ್ಯಂತ್ರ ನಡೆಯುತ್ತಿದೆ: ಚಿಕ್ಕಮಗಳೂರಿನಲ್ಲಿ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  

22/12/2021, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಬೆಳಗಾವಿಯಲ್ಲಿ ಎಂಇಎಸ್ ಜತೆ ಕಾಂಗ್ರೆಸ್ ಸೇರಿರೋ ಗುಮಾನಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನ ವಿಫಲಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಕರ್ನಾಟಕದಲ್ಲಿ ಕನ್ನಡಿಗರ-ಮರಾಠಿ ಬೇಧಭಾವವಿಲ್ಲ, ಯೋಜನೆಗಳನ್ನ ಇಬ್ಬರಿಗೂ ನೀಡಿದ್ದೇವೆ. ಜಾತಿ-ಧರ್ಮ ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರನ್ನ ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ.ಅನಾವಶ್ಯಕವಾಗಿ ರಾಜಕೀಯ ಗಲಭೆ ಎಬ್ಬಿಸುತ್ತಿರುವವರ ಬಗ್ಗೆ ಎಚ್ಚರಗೊಳ್ಳಬೇಕಿದೆ. 

ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಅವರು ಆಪಾದಿಸಿದರು.

ಮಹಾರಾಷ್ಟ್ರ ಸಿಎಂ ಮರಾಠಿಗರಿಗೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಸಿಎಂ ಅಕ್ಕಪಕ್ಕದವರ ಜೊತೆ ಚೆನ್ನಾಗಿರಬೇಕು. ನೀವು ಮಹಾರಾಷ್ಟ್ರಕ್ಕೆ ಹೋಗಕ್ಕಾಗಲ್ಲ, ನಾವು ಕಳಿಸಿಲ್ಲ ಎಲ್ಲರೂ ಅಣ್ಣ-ತಮ್ಮಣ್ಣಂದಿರಂತೆ ಬದುಕಬೇಕೆಂದು ಮನವಿ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು