1:39 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ ವಿಫಲಗೊಳಿಸಲು  ಷಡ್ಯಂತ್ರ ನಡೆಯುತ್ತಿದೆ: ಚಿಕ್ಕಮಗಳೂರಿನಲ್ಲಿ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  

22/12/2021, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಬೆಳಗಾವಿಯಲ್ಲಿ ಎಂಇಎಸ್ ಜತೆ ಕಾಂಗ್ರೆಸ್ ಸೇರಿರೋ ಗುಮಾನಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನ ವಿಫಲಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಕರ್ನಾಟಕದಲ್ಲಿ ಕನ್ನಡಿಗರ-ಮರಾಠಿ ಬೇಧಭಾವವಿಲ್ಲ, ಯೋಜನೆಗಳನ್ನ ಇಬ್ಬರಿಗೂ ನೀಡಿದ್ದೇವೆ. ಜಾತಿ-ಧರ್ಮ ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರನ್ನ ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ.ಅನಾವಶ್ಯಕವಾಗಿ ರಾಜಕೀಯ ಗಲಭೆ ಎಬ್ಬಿಸುತ್ತಿರುವವರ ಬಗ್ಗೆ ಎಚ್ಚರಗೊಳ್ಳಬೇಕಿದೆ. 

ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಅವರು ಆಪಾದಿಸಿದರು.

ಮಹಾರಾಷ್ಟ್ರ ಸಿಎಂ ಮರಾಠಿಗರಿಗೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಸಿಎಂ ಅಕ್ಕಪಕ್ಕದವರ ಜೊತೆ ಚೆನ್ನಾಗಿರಬೇಕು. ನೀವು ಮಹಾರಾಷ್ಟ್ರಕ್ಕೆ ಹೋಗಕ್ಕಾಗಲ್ಲ, ನಾವು ಕಳಿಸಿಲ್ಲ ಎಲ್ಲರೂ ಅಣ್ಣ-ತಮ್ಮಣ್ಣಂದಿರಂತೆ ಬದುಕಬೇಕೆಂದು ಮನವಿ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು