3:24 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ ವಿಫಲಗೊಳಿಸಲು  ಷಡ್ಯಂತ್ರ ನಡೆಯುತ್ತಿದೆ: ಚಿಕ್ಕಮಗಳೂರಿನಲ್ಲಿ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  

22/12/2021, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಬೆಳಗಾವಿಯಲ್ಲಿ ಎಂಇಎಸ್ ಜತೆ ಕಾಂಗ್ರೆಸ್ ಸೇರಿರೋ ಗುಮಾನಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನ ವಿಫಲಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಎಂಇಎಸ್ ಇರಬೇಕಾದದ್ದು ಮಹಾರಾಷ್ಟ್ರದಲ್ಲಿ ಕರ್ನಾಟಕದಲ್ಲಿ ಅಲ್ಲ. ಕರ್ನಾಟಕದಲ್ಲಿ ಕನ್ನಡಿಗರ-ಮರಾಠಿ ಬೇಧಭಾವವಿಲ್ಲ, ಯೋಜನೆಗಳನ್ನ ಇಬ್ಬರಿಗೂ ನೀಡಿದ್ದೇವೆ. ಜಾತಿ-ಧರ್ಮ ನೋಡದೆ ಬಿಜೆಪಿ ಸರ್ಕಾರ ಏಖಮುಖವಾಗಿ ಯೋಜನೆ-ಅನುದಾನ ಕೊಡುತ್ತಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ ಭಾಗದವರನ್ನ ಒಂದೇ ತಾಯಿ ಮಕ್ಕಳಂತೆ ನೋಡಿದ್ದೇವೆ.ಅನಾವಶ್ಯಕವಾಗಿ ರಾಜಕೀಯ ಗಲಭೆ ಎಬ್ಬಿಸುತ್ತಿರುವವರ ಬಗ್ಗೆ ಎಚ್ಚರಗೊಳ್ಳಬೇಕಿದೆ. 

ಗೂಂಡಾ ಕಾಯ್ದೆ, ದೇಶದ್ರೋಹದ ಕಾಯ್ದೆಯಡಿ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ. ಮಹಾರಾಷ್ಟ್ರ ಸರ್ಕಾರವೇ ಇದಕ್ಕೆ ಕುಮ್ಮುಕ್ಕು ನೀಡುತ್ತಿದೆ ಎಂದು ಅವರು ಆಪಾದಿಸಿದರು.

ಮಹಾರಾಷ್ಟ್ರ ಸಿಎಂ ಮರಾಠಿಗರಿಗೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಸಿಎಂ ಅಕ್ಕಪಕ್ಕದವರ ಜೊತೆ ಚೆನ್ನಾಗಿರಬೇಕು. ನೀವು ಮಹಾರಾಷ್ಟ್ರಕ್ಕೆ ಹೋಗಕ್ಕಾಗಲ್ಲ, ನಾವು ಕಳಿಸಿಲ್ಲ ಎಲ್ಲರೂ ಅಣ್ಣ-ತಮ್ಮಣ್ಣಂದಿರಂತೆ ಬದುಕಬೇಕೆಂದು ಮನವಿ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು