4:07 AM Saturday20 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಬೆಳಗಾವಿ: ಅಥಣಿ ಹೊರವಲಯದ ಮನೆಯಲ್ಲಿ ದಂಪತಿ ಶವ ಪತ್ತೆ: ಕೊಲೆ ಶಂಕೆ; ಚುರುಕುಗೊಂಡ ಪೊಲೀಸ್ ತನಿಖೆ

08/11/2024, 10:22

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚವ್ಹಾಣ ತೋಟದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಕೊಲೆಗೀಡಾಗಿರಬೇಕೆಂದು ಶಂಕಿಸಲಾಗಿದೆ.
ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ದಂಪತಿ ನಿಗೂಢವಾಗಿ ಸಾವಿಗೀಡಾಗಿದವರು. ಈ ಮುನ್ನ ಇದನ್ನು‌ ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು.
ಸುಮಾರು 6 -7 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಸಾವಿಗೀಡಾದ ದಂಪತಿಯ ಪುತ್ರ ದಿಲೀಪ್ ದರೋಡೆ ಪ್ರಕರಣವೊಂದರಲ್ಲಿ ಜಮಖಂಡಿಯಲ್ಲಿ ಬಂಧಿಸಲ್ಪಟ್ಟಿದ್ದ. ಆತನನ್ನು ಬಿಡಿಸಲು ದಂಪತಿ 7-8 ದಿನಗಳ ಹಿಂದೆ ಜಮಖಂಡಿಗೆ ತೆರಳಿ ವಕೀಲರನ್ನು ಭೇಟಿಯಾಗಿ ಬಂದಿದ್ದಾರೆ. ಮತ್ತೆ ಎಲ್ಲೂ ಹೊರಗೆ ಕಾಣಿಸಲಿಲ್ಲ. ಆದರೆ ಬುಧವಾರ ಮನೆಯಿಂದ ವಾಸನೆ ಬರುತ್ತಿರುವುದಾಗಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಮೊದಲು ಇದು ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿತ್ತು.‌ ಆತ್ಮಹತ್ಯೆ ಇರಬಹುದು ಎನ್ನುವುದಕ್ಕೆ 2 ಕಾರಣಗಳಿವೆ. ಮೊದಲನೆಯದಾಗಿ, ಮಗ ದಿಲೀಪನನ್ನು ಪೊಲೀಸರು ಬಂಧಿಸಿರುವುದು, ಎರಡನೆಯದು ದಿಲೀಪನಿಗೆ ಮದುವೆ ಗೊತ್ತು ಮಾಡಿದ ಹಿನ್ನೆಲೆಯಲ್ಲಿ ಹೆಣ್ಣಿನ ಕಡೆಯವರ ಮನೆ ನೋಡಲು ಬರುವವರಿದ್ದರು. ಅವರಿಗೆ ಮುಖ ತೋರಿಸಲಾಗದೆ ಆತ್ಮಹತ್ಯೆ ಮಾಡಕೊಂಡಿರಬಹುದು ಎನ್ನಲಾಗಿತ್ತು. ಆದರೆ, ಮನೆಯ ಒಳಗೆ ಪ್ರವೇಶಿಸಿದ ಪೊಲೀಸರಿಗೆ ಸಂಶಯ ಹುಟ್ಟಿದೆ. ಮನೆಯೊಳಗಿನ‌ ವಾತಾವರಣವನ್ನು ನೋಡಿ ಇದು ಕೊಲೆಯಾಗಿರಬಹುದು ಎಂದು ಶಂಕಿಸಿ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲಿಸುತ್ತಾರೆ. ಅವರು ಕೂಡ ಇದು ಕೊಲೆ ಎನ್ನುವುದಕ್ಕೆ ಸಾಕ್ಷಿಗಳನ್ನು ಪತ್ತೆ ಮಾಡುತ್ತಾರೆ. ನಂತರ ಪೊಸ್ಟ್ ಮಾರ್ಟಮ್ ನಡೆಸಿದಾಗ ಅದರ ವರದಿಯಲ್ಲಿ ಕೂಡ ಕೊಲೆಯ ಸಾಧ್ಯತೆ ಕಂಡು ಬಂದಿದೆ.ವಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾ ಶಂಕರ ಗುಳೇದ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಬುಧವಾರ ಮತ್ತು ಗುರುವಾರ ಅಥಣಿಗೆ ಭೇಟಿ ನೀಡಿ ತೀವ್ರ ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು