4:21 PM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಬೆಳಗಾವಿ: ಅಥಣಿ ಹೊರವಲಯದ ಮನೆಯಲ್ಲಿ ದಂಪತಿ ಶವ ಪತ್ತೆ: ಕೊಲೆ ಶಂಕೆ; ಚುರುಕುಗೊಂಡ ಪೊಲೀಸ್ ತನಿಖೆ

08/11/2024, 10:22

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚವ್ಹಾಣ ತೋಟದಲ್ಲಿ ದಂಪತಿಯ ಶವ ಪತ್ತೆಯಾಗಿದ್ದು, ಕೊಲೆಗೀಡಾಗಿರಬೇಕೆಂದು ಶಂಕಿಸಲಾಗಿದೆ.
ಚವ್ಹಾಣ ತೋಟದಲ್ಲಿನ ನಾನಾಸಾಹೇಬ ಚವ್ಹಾಣ (58) ಮತ್ತು ಜಯಶ್ರೀ ಚವ್ಹಾಣ (51) ದಂಪತಿ ನಿಗೂಢವಾಗಿ ಸಾವಿಗೀಡಾಗಿದವರು. ಈ ಮುನ್ನ ಇದನ್ನು‌ ಆತ್ಮಹತ್ಯೆ ಎಂದು ಶಂಕಿಸಲಾಗಿತ್ತು.
ಸುಮಾರು 6 -7 ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಸಾವಿಗೀಡಾದ ದಂಪತಿಯ ಪುತ್ರ ದಿಲೀಪ್ ದರೋಡೆ ಪ್ರಕರಣವೊಂದರಲ್ಲಿ ಜಮಖಂಡಿಯಲ್ಲಿ ಬಂಧಿಸಲ್ಪಟ್ಟಿದ್ದ. ಆತನನ್ನು ಬಿಡಿಸಲು ದಂಪತಿ 7-8 ದಿನಗಳ ಹಿಂದೆ ಜಮಖಂಡಿಗೆ ತೆರಳಿ ವಕೀಲರನ್ನು ಭೇಟಿಯಾಗಿ ಬಂದಿದ್ದಾರೆ. ಮತ್ತೆ ಎಲ್ಲೂ ಹೊರಗೆ ಕಾಣಿಸಲಿಲ್ಲ. ಆದರೆ ಬುಧವಾರ ಮನೆಯಿಂದ ವಾಸನೆ ಬರುತ್ತಿರುವುದಾಗಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಮೊದಲು ಇದು ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿತ್ತು.‌ ಆತ್ಮಹತ್ಯೆ ಇರಬಹುದು ಎನ್ನುವುದಕ್ಕೆ 2 ಕಾರಣಗಳಿವೆ. ಮೊದಲನೆಯದಾಗಿ, ಮಗ ದಿಲೀಪನನ್ನು ಪೊಲೀಸರು ಬಂಧಿಸಿರುವುದು, ಎರಡನೆಯದು ದಿಲೀಪನಿಗೆ ಮದುವೆ ಗೊತ್ತು ಮಾಡಿದ ಹಿನ್ನೆಲೆಯಲ್ಲಿ ಹೆಣ್ಣಿನ ಕಡೆಯವರ ಮನೆ ನೋಡಲು ಬರುವವರಿದ್ದರು. ಅವರಿಗೆ ಮುಖ ತೋರಿಸಲಾಗದೆ ಆತ್ಮಹತ್ಯೆ ಮಾಡಕೊಂಡಿರಬಹುದು ಎನ್ನಲಾಗಿತ್ತು. ಆದರೆ, ಮನೆಯ ಒಳಗೆ ಪ್ರವೇಶಿಸಿದ ಪೊಲೀಸರಿಗೆ ಸಂಶಯ ಹುಟ್ಟಿದೆ. ಮನೆಯೊಳಗಿನ‌ ವಾತಾವರಣವನ್ನು ನೋಡಿ ಇದು ಕೊಲೆಯಾಗಿರಬಹುದು ಎಂದು ಶಂಕಿಸಿ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲಿಸುತ್ತಾರೆ. ಅವರು ಕೂಡ ಇದು ಕೊಲೆ ಎನ್ನುವುದಕ್ಕೆ ಸಾಕ್ಷಿಗಳನ್ನು ಪತ್ತೆ ಮಾಡುತ್ತಾರೆ. ನಂತರ ಪೊಸ್ಟ್ ಮಾರ್ಟಮ್ ನಡೆಸಿದಾಗ ಅದರ ವರದಿಯಲ್ಲಿ ಕೂಡ ಕೊಲೆಯ ಸಾಧ್ಯತೆ ಕಂಡು ಬಂದಿದೆ.ವಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾ ಶಂಕರ ಗುಳೇದ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ಬುಧವಾರ ಮತ್ತು ಗುರುವಾರ ಅಥಣಿಗೆ ಭೇಟಿ ನೀಡಿ ತೀವ್ರ ತನಿಖೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು