2:29 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಬೆಳಗಾವಿಯ ಅಥಣಿ: ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ವ್ತಕ್ತಿಯ ಶವ ಪತ್ತೆ; ಕೊಲೆಗೈದು ಬಾವಿಗೆಸೆದ ಶಂಕೆ

03/04/2023, 18:58

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಶಿರೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಗಂಡಸಿನ ಶವವೊಂದು ಬಾವಿಯಲ್ಲಿ ಪತ್ತೆಯಾಗಿದೆ.
ಪಾಂಡೇಗಾವ ಗ್ರಾಮದ ಹೊರವಲಯದ ಖಿಳೆಗಾಂವ ಆಗ್ರಾನಿ ಹಳ್ಳದ ಪಕ್ಕದ ಭಾವಿಯೊಂದರಲ್ಲಿ ಶವ ಪತ್ತೆಯಾಗಿದ್ದು, ಸುಮಾರು ದಿನಗಳ ಹಿಂದೆ ಕೊಲೆ ಗೈದು ಸೊಂಟಕ್ಕೆ ಕಲ್ಲು ಕಟ್ಟಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.


ಮೈ ಮೇಲೆ ಕೆಂಪು ಬಣ್ಣದ ಟಿ ಶರ್ಟ್ ಕಂದು ಕಪ್ಪು ಬಣ್ಣದ ಪ್ಯಾಂಟ್ ಇದೆ. ಸುಮಾರು ದಿನಗಳಿಂದ ಬಾವಿಯಲ್ಲೇ ಇದ್ದರಿಂದ ಸಂಪೂರ್ಣ ಕೊಳೆತು ಗುರುತು ಸಿಗದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ..
ಬಾವಿಯಲ್ಲಿನ ನೀರು ಕಡಿಮೆ ಯಾದ್ಧರಿಂದ ಶವವನ್ನು ಸ್ಥಳೀಯ ರೈತನೊಬ್ಬರಿಗೆ ಕಾಣಿಸಿದಾಗ ಕೂಡಲೇ ಅಥಣಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಅಥಣಿ ಪಿಎಸ್ಐ ಶಿವಶಂಕರ ಮುಖರಿ ಹಾಗೂ ತಂಡ ಭೇಟಿ ನೀಡಿ ಅಥಣಿ ಅಗ್ನಿಶಾಮಕ ಸಿಬ್ಬಂದಿಗಳ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಶವ ಹೊರ ತೆಗೆಯಲಾಗಿದೆ. ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ವ್ಯಕ್ತಿಯ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮರಣೋತ್ತರ ಪರೀಕ್ಷೆ ಹಾಗು ಪೊಲೀಸ್ ತನಿಖೆ ನಂತರವೇ ಶವ ಯಾರದ್ದು ಕೃತ್ಯ ವೆಸಗಿರುವರು ಯಾರು ಅಂತಾ ಗೊತ್ತಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು