11:33 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಬೆಳಗಾವಿ: ಭಾರಿ ಗಾಳಿ ಮಳೆ; ಮರ, ಲೈಟ್ ಕಂಬಗಳು ಧರಾಶಾಯಿ; ದ್ರಾಕ್ಷೆ ಬೆಳೆಗೆ ಅಪಾರ ಹಾನಿ, ಕಂಗಾಲಾದ ರೈತರು 

09/04/2022, 23:09

ಬೆಳಗಾವಿ(reporterkarnataka.com): ಜಿಲ್ಲೆಯ ಹಲವೆಡೆ ಶನಿವಾರ ಮಿಂಚು ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಹಲವು ಮರ ಹಾಗೂ ವಿದ್ಯುತ್ ಕಂಬಗಳು ಧರಾಶಾಯಿಯಾಗಿದೆ.

ಗಾಳಿ ಸಮೇತ ಮಳೆಯಾಗುವುದರಿಂದ ಮುಖ್ಯ ಬಸ್ ನಿಲ್ದಾಣ ಎದುರುಗಡೆ ಇರುವ ಸಿಂಗನಲದ ಕರೆಂಟ್ ಕಂಬಗಳಿಗೆ ಹಾಕಿರುವ ಜಾಹೀರಾತು ಬ್ಯಾನರ್ ಗಳು ಹರಿದು ಹೋಗಿವೆ. ಬ್ಯಾನರ್ ತುಂಡುಗಳು ಗಾಳಿಗೆ ಹಾರಿ ವಿದ್ಯುತ್ ವಯರ್ ಗಳಿಗೆ ತಾಗಿ ಶಾರ್ಟ್ ಸರ್ಕಿಟ್ ಆಗುವ ದೃಶ್ಯ ಕಂಡು ಬಂತು. ಅಲ್ಲಲ್ಲಿ ಮರಗಳು ಉರುಳಿ ಅಂಗಡಿ ಮುಂಗಟ್ಟುಗಳಿಗೆ ಹಾನಿ ಸಂಭವಿಸಿದೆ. 

ಬೆಳಗಾವಿ, ನಿಪ್ಪಾಣಿ, ಅಥಣಿ ಮುಂತಾದ ತಾಲೂಕುಗಳಲ್ಲಿ ಭಾರಿ
ಮಳೆಯಾಗಿದೆ. ಅಥಣಿ ತಾಲೂಕಿನ ಐಗಳಿ,ತೆಲಸಂಗ,ಕೋಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ  ಬಾರಿ ಅಕಾಲಿಕ ಗಾಳಿ ಮಳೆ ಸುರಿದಿದೆ.  ಗಾಳಿ ರಭಸಕ್ಕೆ ಗಿಡ,  ಮರಗಳು  ಹಾಗೂ   ಲೈಟ್ ಕಂಬಗಳು  ಉರಳಿವೆ. ಇನ್ನೂ  ಐಗಳಿ.ತೆಿಲಸಂಗ ಕೋಹಳ್ಳಿ ಗ್ರಾಮದ ರೈತರು ಐಗಳಿ ದ್ರಾಕ್ಷಿ  ಸಂಸ್ಕರಣಾ ಘಟಕದ ಸಮೀಪ ಇರುವ ಶೇಡ್ ಗಳಲ್ಲಿ ತುಂಬಿದ ದ್ರಾಕ್ಷಿ  ಹಣ್ಣುಗಳು ಮಳೆಗೆ ಸಂಪೂರ್ಣ ವಾಗಿ  ತೊಯ್ದು ನಾಶವಾಗಿವೆ.   ರೈತರು ವರ್ಷವಿಡಿ   ದುಡಿದು ಕೊನೆಯ ಹಂತದಲ್ಲಿ ಅಪಾರವಾದ ನಷ್ಟ ಅನುಭವಿಸುವಂತಾಗಿದೆ.


ಇದರಿಂದ ರೈತರು ಕಂಗಾಲ ಆಗಿದ್ದಾರೆ  ಸಾವಿರಾರು ರೂ. ಸಾಲ ಮಾಡಿ ಖರ್ಚು ಮಾಡಿ ಬೆಳೆದ  ಬೆಳೆ  ಕೈಗೆ  ಬಾರದೆ ಇರುವುದು   ರೈತರ ಕಣ್ಣಲ್ಲಿ ನೀರು ತರಿಸಿದೆ  ಇದಕ್ಕೆ ಸರ್ಕಾರ  ಕೂಡಲೇ  ಪರಿಹಾರ   ನೀಡಬೇಕು  ಎಂದು ರೈತರು  ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು