4:13 PM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬೆಳಗಾವಿ: ಭಾರಿ ಗಾಳಿ ಮಳೆ; ಮರ, ಲೈಟ್ ಕಂಬಗಳು ಧರಾಶಾಯಿ; ದ್ರಾಕ್ಷೆ ಬೆಳೆಗೆ ಅಪಾರ ಹಾನಿ, ಕಂಗಾಲಾದ ರೈತರು 

09/04/2022, 23:09

ಬೆಳಗಾವಿ(reporterkarnataka.com): ಜಿಲ್ಲೆಯ ಹಲವೆಡೆ ಶನಿವಾರ ಮಿಂಚು ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಹಲವು ಮರ ಹಾಗೂ ವಿದ್ಯುತ್ ಕಂಬಗಳು ಧರಾಶಾಯಿಯಾಗಿದೆ.

ಗಾಳಿ ಸಮೇತ ಮಳೆಯಾಗುವುದರಿಂದ ಮುಖ್ಯ ಬಸ್ ನಿಲ್ದಾಣ ಎದುರುಗಡೆ ಇರುವ ಸಿಂಗನಲದ ಕರೆಂಟ್ ಕಂಬಗಳಿಗೆ ಹಾಕಿರುವ ಜಾಹೀರಾತು ಬ್ಯಾನರ್ ಗಳು ಹರಿದು ಹೋಗಿವೆ. ಬ್ಯಾನರ್ ತುಂಡುಗಳು ಗಾಳಿಗೆ ಹಾರಿ ವಿದ್ಯುತ್ ವಯರ್ ಗಳಿಗೆ ತಾಗಿ ಶಾರ್ಟ್ ಸರ್ಕಿಟ್ ಆಗುವ ದೃಶ್ಯ ಕಂಡು ಬಂತು. ಅಲ್ಲಲ್ಲಿ ಮರಗಳು ಉರುಳಿ ಅಂಗಡಿ ಮುಂಗಟ್ಟುಗಳಿಗೆ ಹಾನಿ ಸಂಭವಿಸಿದೆ. 

ಬೆಳಗಾವಿ, ನಿಪ್ಪಾಣಿ, ಅಥಣಿ ಮುಂತಾದ ತಾಲೂಕುಗಳಲ್ಲಿ ಭಾರಿ
ಮಳೆಯಾಗಿದೆ. ಅಥಣಿ ತಾಲೂಕಿನ ಐಗಳಿ,ತೆಲಸಂಗ,ಕೋಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ  ಬಾರಿ ಅಕಾಲಿಕ ಗಾಳಿ ಮಳೆ ಸುರಿದಿದೆ.  ಗಾಳಿ ರಭಸಕ್ಕೆ ಗಿಡ,  ಮರಗಳು  ಹಾಗೂ   ಲೈಟ್ ಕಂಬಗಳು  ಉರಳಿವೆ. ಇನ್ನೂ  ಐಗಳಿ.ತೆಿಲಸಂಗ ಕೋಹಳ್ಳಿ ಗ್ರಾಮದ ರೈತರು ಐಗಳಿ ದ್ರಾಕ್ಷಿ  ಸಂಸ್ಕರಣಾ ಘಟಕದ ಸಮೀಪ ಇರುವ ಶೇಡ್ ಗಳಲ್ಲಿ ತುಂಬಿದ ದ್ರಾಕ್ಷಿ  ಹಣ್ಣುಗಳು ಮಳೆಗೆ ಸಂಪೂರ್ಣ ವಾಗಿ  ತೊಯ್ದು ನಾಶವಾಗಿವೆ.   ರೈತರು ವರ್ಷವಿಡಿ   ದುಡಿದು ಕೊನೆಯ ಹಂತದಲ್ಲಿ ಅಪಾರವಾದ ನಷ್ಟ ಅನುಭವಿಸುವಂತಾಗಿದೆ.


ಇದರಿಂದ ರೈತರು ಕಂಗಾಲ ಆಗಿದ್ದಾರೆ  ಸಾವಿರಾರು ರೂ. ಸಾಲ ಮಾಡಿ ಖರ್ಚು ಮಾಡಿ ಬೆಳೆದ  ಬೆಳೆ  ಕೈಗೆ  ಬಾರದೆ ಇರುವುದು   ರೈತರ ಕಣ್ಣಲ್ಲಿ ನೀರು ತರಿಸಿದೆ  ಇದಕ್ಕೆ ಸರ್ಕಾರ  ಕೂಡಲೇ  ಪರಿಹಾರ   ನೀಡಬೇಕು  ಎಂದು ರೈತರು  ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು