7:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಳಗಾವಿ: ಭಾರಿ ಗಾಳಿ ಮಳೆ; ಮರ, ಲೈಟ್ ಕಂಬಗಳು ಧರಾಶಾಯಿ; ದ್ರಾಕ್ಷೆ ಬೆಳೆಗೆ ಅಪಾರ ಹಾನಿ, ಕಂಗಾಲಾದ ರೈತರು 

09/04/2022, 23:09

ಬೆಳಗಾವಿ(reporterkarnataka.com): ಜಿಲ್ಲೆಯ ಹಲವೆಡೆ ಶನಿವಾರ ಮಿಂಚು ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಹಲವು ಮರ ಹಾಗೂ ವಿದ್ಯುತ್ ಕಂಬಗಳು ಧರಾಶಾಯಿಯಾಗಿದೆ.

ಗಾಳಿ ಸಮೇತ ಮಳೆಯಾಗುವುದರಿಂದ ಮುಖ್ಯ ಬಸ್ ನಿಲ್ದಾಣ ಎದುರುಗಡೆ ಇರುವ ಸಿಂಗನಲದ ಕರೆಂಟ್ ಕಂಬಗಳಿಗೆ ಹಾಕಿರುವ ಜಾಹೀರಾತು ಬ್ಯಾನರ್ ಗಳು ಹರಿದು ಹೋಗಿವೆ. ಬ್ಯಾನರ್ ತುಂಡುಗಳು ಗಾಳಿಗೆ ಹಾರಿ ವಿದ್ಯುತ್ ವಯರ್ ಗಳಿಗೆ ತಾಗಿ ಶಾರ್ಟ್ ಸರ್ಕಿಟ್ ಆಗುವ ದೃಶ್ಯ ಕಂಡು ಬಂತು. ಅಲ್ಲಲ್ಲಿ ಮರಗಳು ಉರುಳಿ ಅಂಗಡಿ ಮುಂಗಟ್ಟುಗಳಿಗೆ ಹಾನಿ ಸಂಭವಿಸಿದೆ. 

ಬೆಳಗಾವಿ, ನಿಪ್ಪಾಣಿ, ಅಥಣಿ ಮುಂತಾದ ತಾಲೂಕುಗಳಲ್ಲಿ ಭಾರಿ
ಮಳೆಯಾಗಿದೆ. ಅಥಣಿ ತಾಲೂಕಿನ ಐಗಳಿ,ತೆಲಸಂಗ,ಕೋಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ  ಬಾರಿ ಅಕಾಲಿಕ ಗಾಳಿ ಮಳೆ ಸುರಿದಿದೆ.  ಗಾಳಿ ರಭಸಕ್ಕೆ ಗಿಡ,  ಮರಗಳು  ಹಾಗೂ   ಲೈಟ್ ಕಂಬಗಳು  ಉರಳಿವೆ. ಇನ್ನೂ  ಐಗಳಿ.ತೆಿಲಸಂಗ ಕೋಹಳ್ಳಿ ಗ್ರಾಮದ ರೈತರು ಐಗಳಿ ದ್ರಾಕ್ಷಿ  ಸಂಸ್ಕರಣಾ ಘಟಕದ ಸಮೀಪ ಇರುವ ಶೇಡ್ ಗಳಲ್ಲಿ ತುಂಬಿದ ದ್ರಾಕ್ಷಿ  ಹಣ್ಣುಗಳು ಮಳೆಗೆ ಸಂಪೂರ್ಣ ವಾಗಿ  ತೊಯ್ದು ನಾಶವಾಗಿವೆ.   ರೈತರು ವರ್ಷವಿಡಿ   ದುಡಿದು ಕೊನೆಯ ಹಂತದಲ್ಲಿ ಅಪಾರವಾದ ನಷ್ಟ ಅನುಭವಿಸುವಂತಾಗಿದೆ.


ಇದರಿಂದ ರೈತರು ಕಂಗಾಲ ಆಗಿದ್ದಾರೆ  ಸಾವಿರಾರು ರೂ. ಸಾಲ ಮಾಡಿ ಖರ್ಚು ಮಾಡಿ ಬೆಳೆದ  ಬೆಳೆ  ಕೈಗೆ  ಬಾರದೆ ಇರುವುದು   ರೈತರ ಕಣ್ಣಲ್ಲಿ ನೀರು ತರಿಸಿದೆ  ಇದಕ್ಕೆ ಸರ್ಕಾರ  ಕೂಡಲೇ  ಪರಿಹಾರ   ನೀಡಬೇಕು  ಎಂದು ರೈತರು  ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು