3:09 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆ‌‌ಕೊಳೆ ರೋಗ

15/10/2022, 10:27

ರಾಹುಲ್ ಅಥಣಿ ಬೆಳಗಾವಿ

info.reporter Karnataka gmail.com

ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ.
ಅಥಣಿ ತಾಲೂಕಿನ ಸುಮಾರು 23 ಸಾವಿರ ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಿದೆ, ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದ ಬಹುತೇಕ ರೈತರಿಗೆ ದ್ರಾಕ್ಷಿ ಬೆಳೆಯೇ ಜೀವನಾಧಾರ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ದ್ರಾಕ್ಷಿ ಗಿಡಗಳನ್ನು ಚಾಟ್ನಿ ಮಾಡಲಾಗಿದೆ. ಬಹಳಷ್ಟು ತೋಟಗಳಲ್ಲಿ ಈಗಾಗಲೇ ಹೂಗಳು ಮೂಡಿ, ಕಾಯಿ ಕಟ್ಟುವ ಹಂತದಲ್ಲಿವೆ. ಈ ಹಂತದಲ್ಲಿ ಉತ್ತಮ ಹವಾಮಾನ ಅಗತ್ಯ.
ಆದರೆ ಸುರಿಯುತ್ತಿರುವುದರಿಂದ ಈಗ ಮಳೆ ಡವಣಿ ಹಾಗೂ ಕೊಳೆ ರೋಗದಿಂದ ದ್ರಾಕ್ಷಿ ಕಾಳುಗಳ ಗೊಂಚಲು ಕೊಳೆಯುತ್ತಿವೆ. ಹೂವುಗಳು ಉದುರುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಚಾಟಿ ಮಾಡಿದ ತೋಟಗಳಲ್ಲಿ ಈಗಷ್ಟೇ ಹೂವು ಮೂಡುತ್ತಿದ್ದು ಅದಕ್ಕೂ ಡೌನಿ ರೋಗ ಬರುವ ಆತಂಕ ಎದುರಾಗಿದೆ.


ತಾಲೂಕಿನ ಅರಟಾಳ, ಬಾಡಗಿ, ಕೋಹಳ್ಳಿ, ಬಡಚಿ, ಯಕ್ಕಂಚಿ, ಯಲಿಹಡಲಗಿ, ಅಡಹಳ್ಳಿ, ಅಡಹಳಟ್ಟಿ, ಕಕಮರಿ, ರಾಮತೀರ್ಥ, ಕೊಟ್ಟಲಗಿ ಸೇರಿದಂತೆ ತೆಲಸಂಗ ಹೋಬಳಿಯ ವ್ಯಾಪ್ತಿಯ ಅನೇಕ ಹಳ್ಳಿಗಳಲ್ಲಿ ದ್ರಾಕ್ಷಿ ಬೆಳೆಗೆ ರೋಗ ತಗುಲಿದೆ. ದ್ರಾಕ್ಷಿ ಗೊನೆಯಲ್ಲಿ ನೀರು ನಿಲ್ಲುವುದರಿಂದ ಗೊನೆಗಳು ಕೊಳೆಯುತ್ತವೆ. ಎಷ್ಟು ಔಷಧ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎಂಬುದು ರೈತರ ಅಭಿಮತ.

ಇತ್ತೀಚಿನ ಸುದ್ದಿ

ಜಾಹೀರಾತು