11:26 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆ‌‌ಕೊಳೆ ರೋಗ

15/10/2022, 10:27

ರಾಹುಲ್ ಅಥಣಿ ಬೆಳಗಾವಿ

info.reporter Karnataka gmail.com

ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ.
ಅಥಣಿ ತಾಲೂಕಿನ ಸುಮಾರು 23 ಸಾವಿರ ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಿದೆ, ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದ ಬಹುತೇಕ ರೈತರಿಗೆ ದ್ರಾಕ್ಷಿ ಬೆಳೆಯೇ ಜೀವನಾಧಾರ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ದ್ರಾಕ್ಷಿ ಗಿಡಗಳನ್ನು ಚಾಟ್ನಿ ಮಾಡಲಾಗಿದೆ. ಬಹಳಷ್ಟು ತೋಟಗಳಲ್ಲಿ ಈಗಾಗಲೇ ಹೂಗಳು ಮೂಡಿ, ಕಾಯಿ ಕಟ್ಟುವ ಹಂತದಲ್ಲಿವೆ. ಈ ಹಂತದಲ್ಲಿ ಉತ್ತಮ ಹವಾಮಾನ ಅಗತ್ಯ.
ಆದರೆ ಸುರಿಯುತ್ತಿರುವುದರಿಂದ ಈಗ ಮಳೆ ಡವಣಿ ಹಾಗೂ ಕೊಳೆ ರೋಗದಿಂದ ದ್ರಾಕ್ಷಿ ಕಾಳುಗಳ ಗೊಂಚಲು ಕೊಳೆಯುತ್ತಿವೆ. ಹೂವುಗಳು ಉದುರುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಚಾಟಿ ಮಾಡಿದ ತೋಟಗಳಲ್ಲಿ ಈಗಷ್ಟೇ ಹೂವು ಮೂಡುತ್ತಿದ್ದು ಅದಕ್ಕೂ ಡೌನಿ ರೋಗ ಬರುವ ಆತಂಕ ಎದುರಾಗಿದೆ.


ತಾಲೂಕಿನ ಅರಟಾಳ, ಬಾಡಗಿ, ಕೋಹಳ್ಳಿ, ಬಡಚಿ, ಯಕ್ಕಂಚಿ, ಯಲಿಹಡಲಗಿ, ಅಡಹಳ್ಳಿ, ಅಡಹಳಟ್ಟಿ, ಕಕಮರಿ, ರಾಮತೀರ್ಥ, ಕೊಟ್ಟಲಗಿ ಸೇರಿದಂತೆ ತೆಲಸಂಗ ಹೋಬಳಿಯ ವ್ಯಾಪ್ತಿಯ ಅನೇಕ ಹಳ್ಳಿಗಳಲ್ಲಿ ದ್ರಾಕ್ಷಿ ಬೆಳೆಗೆ ರೋಗ ತಗುಲಿದೆ. ದ್ರಾಕ್ಷಿ ಗೊನೆಯಲ್ಲಿ ನೀರು ನಿಲ್ಲುವುದರಿಂದ ಗೊನೆಗಳು ಕೊಳೆಯುತ್ತವೆ. ಎಷ್ಟು ಔಷಧ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎಂಬುದು ರೈತರ ಅಭಿಮತ.

ಇತ್ತೀಚಿನ ಸುದ್ದಿ

ಜಾಹೀರಾತು