2:11 AM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆ‌‌ಕೊಳೆ ರೋಗ

15/10/2022, 10:27

ರಾಹುಲ್ ಅಥಣಿ ಬೆಳಗಾವಿ

info.reporter Karnataka gmail.com

ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ.
ಅಥಣಿ ತಾಲೂಕಿನ ಸುಮಾರು 23 ಸಾವಿರ ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಿದೆ, ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದ ಬಹುತೇಕ ರೈತರಿಗೆ ದ್ರಾಕ್ಷಿ ಬೆಳೆಯೇ ಜೀವನಾಧಾರ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ದ್ರಾಕ್ಷಿ ಗಿಡಗಳನ್ನು ಚಾಟ್ನಿ ಮಾಡಲಾಗಿದೆ. ಬಹಳಷ್ಟು ತೋಟಗಳಲ್ಲಿ ಈಗಾಗಲೇ ಹೂಗಳು ಮೂಡಿ, ಕಾಯಿ ಕಟ್ಟುವ ಹಂತದಲ್ಲಿವೆ. ಈ ಹಂತದಲ್ಲಿ ಉತ್ತಮ ಹವಾಮಾನ ಅಗತ್ಯ.
ಆದರೆ ಸುರಿಯುತ್ತಿರುವುದರಿಂದ ಈಗ ಮಳೆ ಡವಣಿ ಹಾಗೂ ಕೊಳೆ ರೋಗದಿಂದ ದ್ರಾಕ್ಷಿ ಕಾಳುಗಳ ಗೊಂಚಲು ಕೊಳೆಯುತ್ತಿವೆ. ಹೂವುಗಳು ಉದುರುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಚಾಟಿ ಮಾಡಿದ ತೋಟಗಳಲ್ಲಿ ಈಗಷ್ಟೇ ಹೂವು ಮೂಡುತ್ತಿದ್ದು ಅದಕ್ಕೂ ಡೌನಿ ರೋಗ ಬರುವ ಆತಂಕ ಎದುರಾಗಿದೆ.


ತಾಲೂಕಿನ ಅರಟಾಳ, ಬಾಡಗಿ, ಕೋಹಳ್ಳಿ, ಬಡಚಿ, ಯಕ್ಕಂಚಿ, ಯಲಿಹಡಲಗಿ, ಅಡಹಳ್ಳಿ, ಅಡಹಳಟ್ಟಿ, ಕಕಮರಿ, ರಾಮತೀರ್ಥ, ಕೊಟ್ಟಲಗಿ ಸೇರಿದಂತೆ ತೆಲಸಂಗ ಹೋಬಳಿಯ ವ್ಯಾಪ್ತಿಯ ಅನೇಕ ಹಳ್ಳಿಗಳಲ್ಲಿ ದ್ರಾಕ್ಷಿ ಬೆಳೆಗೆ ರೋಗ ತಗುಲಿದೆ. ದ್ರಾಕ್ಷಿ ಗೊನೆಯಲ್ಲಿ ನೀರು ನಿಲ್ಲುವುದರಿಂದ ಗೊನೆಗಳು ಕೊಳೆಯುತ್ತವೆ. ಎಷ್ಟು ಔಷಧ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎಂಬುದು ರೈತರ ಅಭಿಮತ.

ಇತ್ತೀಚಿನ ಸುದ್ದಿ

ಜಾಹೀರಾತು