9:41 AM Wednesday12 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಬೆಳಗಾವಿ: ಮಳೆಯಿಂದಾಗಿ 23 ಸಾವಿರ ಎಕರೆ ದ್ರಾಕ್ಷಿ ಬೆಳೆಗೆ ದೌಣಿ, ಬೂದಿ, ಗೊನೆ‌‌ಕೊಳೆ ರೋಗ

15/10/2022, 10:27

ರಾಹುಲ್ ಅಥಣಿ ಬೆಳಗಾವಿ

info.reporter Karnataka gmail.com

ಸತತವಾಗಿ ಎರಡು ವಾರಗಳಿಂದ ಪದೇ ಪದೇ ಸುರಿಯುತ್ತಿರುವ ಮಳೆ ಮತ್ತು ಮೋಡ ಕವಿದ ವಾತಾವರಣ ದ್ರಾಕ್ಷಿಗೆ ಮಾರಕವಾಗಿ ಪರಿಣಮಿಸಿದೆ. ಸಿಹಿ ಹಣ್ಣಿನ ಬೆಳೆಗೆ ದೌಣಿ, ಬೂದಿ, ಗೊನೆ ಕೊಳೆ ರೋಗ ಬಾಧಿಸಿದೆ.
ಅಥಣಿ ತಾಲೂಕಿನ ಸುಮಾರು 23 ಸಾವಿರ ಎಕರೆ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಿದೆ, ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದ ಬಹುತೇಕ ರೈತರಿಗೆ ದ್ರಾಕ್ಷಿ ಬೆಳೆಯೇ ಜೀವನಾಧಾರ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ದ್ರಾಕ್ಷಿ ಗಿಡಗಳನ್ನು ಚಾಟ್ನಿ ಮಾಡಲಾಗಿದೆ. ಬಹಳಷ್ಟು ತೋಟಗಳಲ್ಲಿ ಈಗಾಗಲೇ ಹೂಗಳು ಮೂಡಿ, ಕಾಯಿ ಕಟ್ಟುವ ಹಂತದಲ್ಲಿವೆ. ಈ ಹಂತದಲ್ಲಿ ಉತ್ತಮ ಹವಾಮಾನ ಅಗತ್ಯ.
ಆದರೆ ಸುರಿಯುತ್ತಿರುವುದರಿಂದ ಈಗ ಮಳೆ ಡವಣಿ ಹಾಗೂ ಕೊಳೆ ರೋಗದಿಂದ ದ್ರಾಕ್ಷಿ ಕಾಳುಗಳ ಗೊಂಚಲು ಕೊಳೆಯುತ್ತಿವೆ. ಹೂವುಗಳು ಉದುರುತ್ತಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಚಾಟಿ ಮಾಡಿದ ತೋಟಗಳಲ್ಲಿ ಈಗಷ್ಟೇ ಹೂವು ಮೂಡುತ್ತಿದ್ದು ಅದಕ್ಕೂ ಡೌನಿ ರೋಗ ಬರುವ ಆತಂಕ ಎದುರಾಗಿದೆ.


ತಾಲೂಕಿನ ಅರಟಾಳ, ಬಾಡಗಿ, ಕೋಹಳ್ಳಿ, ಬಡಚಿ, ಯಕ್ಕಂಚಿ, ಯಲಿಹಡಲಗಿ, ಅಡಹಳ್ಳಿ, ಅಡಹಳಟ್ಟಿ, ಕಕಮರಿ, ರಾಮತೀರ್ಥ, ಕೊಟ್ಟಲಗಿ ಸೇರಿದಂತೆ ತೆಲಸಂಗ ಹೋಬಳಿಯ ವ್ಯಾಪ್ತಿಯ ಅನೇಕ ಹಳ್ಳಿಗಳಲ್ಲಿ ದ್ರಾಕ್ಷಿ ಬೆಳೆಗೆ ರೋಗ ತಗುಲಿದೆ. ದ್ರಾಕ್ಷಿ ಗೊನೆಯಲ್ಲಿ ನೀರು ನಿಲ್ಲುವುದರಿಂದ ಗೊನೆಗಳು ಕೊಳೆಯುತ್ತವೆ. ಎಷ್ಟು ಔಷಧ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎಂಬುದು ರೈತರ ಅಭಿಮತ.

ಇತ್ತೀಚಿನ ಸುದ್ದಿ

ಜಾಹೀರಾತು