9:55 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣ ಸೌಧ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ: ಕಾಮಗಾರಿ ಪರಿಶೀಲನೆ ನಡೆಸಿದ ಸ್ಪೀಕರ್ ಖಾದರ್

08/12/2024, 19:06

ಬೆಳಗಾವಿ(reporterkarnataka.com):ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನನಿರ್ಮಾಣವಾಗುತ್ತಿದ್ದು,ಇಂದು ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ
ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದ್ದು ,ನರೇಗಾ ಯೋಜನೆಯಲ್ಲಿ ನೋಂದಣಿಗೊಂಡ ಇನ್ನೂರಕ್ಕೂ ಅಧಿಕ ಮಹಿಳೆಯರು,ಮುಂದೆ ನಮ್ಮ ಮಕ್ಕಳೇ ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಾರೆಂಬ ಉತ್ಸಾಹದಲ್ಲಿ ಕೆಲಸ ನಿರ್ವಹಿಸುತ್ತಿರುವುದು ವಿಶೇಷ.


ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಇದೇ ಬರುವ 11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು.ಈ ಸಂದರ್ಭದಲ್ಲಿ ವಿಧಾನ ಸಭೆ ಕಾರ್ಯದರ್ಶಿ
ವಿಶಾಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು