11:24 AM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ ಸ್ಪೀಕರ್ ಖಾದರ್ ಚಾಲನೆ

02/12/2023, 10:03

ಬೆಳಗಾವಿ(reporterkarnataka.com): ದಶಮಾನೋತ್ಸವ ಪೂರೈಸಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಸುವರ್ಣ ವಿಧಾನಸೌಧಕ್ಕೆ ಹೊಸ ಖದರ್ ತರಲು ವಿನೂತನ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಸುವರ್ಣ ಸೌಧ ಕೇವಲ ವರ್ಷದ ಅಧಿವೇಶನಕ್ಕೆ ಸೀಮಿತಗೊಳಿಸದೇ ಅದೊಂದು ಗಡಿ ಪ್ರದೇಶದ ಪ್ರವಾಸಿ ತಾಣವಾಗಿ ಮಾರ್ಪಾಡಾಗಲು ಚಿಂತನೆ ನಡೆಯುತ್ತಿದೆ.


ಈ ಹಿಂದೆ ವರ್ಷದಲ್ಲೊಮ್ಮೆ ಅಧಿವೇಶನ ಸಂದರ್ಭ ಹತ್ತದಿನೈದು ದಿವಸ ಮಾತ್ರ ರಾತ್ರಿಯ ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಸ್ಪೀಕರ್ ಖಾದರ್ ಅವರು ಅದರಲ್ಲಿ ಮಹತ್ತರ ಬದಲಾವಣೆಗೆ ಅಂಕಿತ ಹಾಕಿದ್ದಾರೆ. ಅಧಿವೇಶನ ನಡೆಯುವ ದಿನಗಳಲ್ಲದೇ ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ರಾಷ್ಟ್ರೀಯ ದಿನಾಚರಣೆಗಳಂದು ಬಣ್ಣಬಣ್ಣದ ವಿನ್ಯಾಸದ ಬೆಳಕಿನೊಂದಿಗೆ ಸುವರ್ಣ ಸೌಧ ಕಂಗೊಳಿಸಲು ರೂಪುರೇಷೆಯನ್ನು ತಯಾರಿಸಿದ್ದಾರೆ. ರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಬೆಳಕಿನ ವ್ಯವಸ್ಥೆ ಮಾಡುತ್ತಿರುವ ಗುತ್ತಿಗೆದಾರರಿಗೆ 10 ವರ್ಷದ ಸುವರ್ಣಸೌಧದ ಬೆಳಕಿನ ನಿರ್ವಹಣೆ ಕೊಟ್ಟಿರುವ ಸ್ಪೀಕರ್ ಡಿಸೆಂಬರ್ 4 ಅಥವಾ 5 ರಂದು ಅದನ್ನು ಉದ್ಘಾಟಿಸುವರು.
RGBW ಎಲ್ಇಡಿ ಡೈನಾಮಿಕ್ ಲೈಟ್ ನೊಂದಿಗೆ ಮುಂದೆ ಸುವರ್ಣ ಸೌಧ ಕಂಗೊಳಿಸಲಿದೆ. ಬಗೆಬಗೆಯ ವಿನ್ಯಾಸ, ಹಲವು ಬಣ್ಣಗಳಲ್ಲಿ ಕಂಪ್ಯೂಟರೀಕೃತ ಸೌಲಭ್ಯದೊಂದಿಗೆ ಸೌಧದ ಅಂದ ನೂರ್ಮಡಿಗೊಳಿಸಲಿದೆ. ವಿಶೇಷ ಅಂದರೆ ಈ ಹಿಂದೆ ಹತ್ತದಿನೈದು ದಿನ ಉರಿದ ಬೆಳಕಿನ ಅದೇ ಖರ್ಚು ವೆಚ್ಚದಲ್ಲಿ ಈ ಡಿಜಿಟಲೈಸ್ಡ್ ಲೈಟ್ಸ್ ಕೂಡಾ ವರ್ಷಪೂರ್ತಿ ಬೆಳಗಲಿದೆ. ಹೀಗೇ 10 ವರ್ಷದ ಕರಾರನ್ನು ಈ ಯೋಜನೆಗೆ ನೀಡಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರ ವಿನೂತನ ದೂರದೃಷ್ಟಿಯ ಯೋಜನೆಗೆ ಎಲ್ಲರೂ ಶಹಬ್ಬಾಸ್ ಗಿರಿ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು