6:11 AM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ ಸ್ಪೀಕರ್ ಖಾದರ್ ಚಾಲನೆ

02/12/2023, 10:03

ಬೆಳಗಾವಿ(reporterkarnataka.com): ದಶಮಾನೋತ್ಸವ ಪೂರೈಸಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಸುವರ್ಣ ವಿಧಾನಸೌಧಕ್ಕೆ ಹೊಸ ಖದರ್ ತರಲು ವಿನೂತನ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಸುವರ್ಣ ಸೌಧ ಕೇವಲ ವರ್ಷದ ಅಧಿವೇಶನಕ್ಕೆ ಸೀಮಿತಗೊಳಿಸದೇ ಅದೊಂದು ಗಡಿ ಪ್ರದೇಶದ ಪ್ರವಾಸಿ ತಾಣವಾಗಿ ಮಾರ್ಪಾಡಾಗಲು ಚಿಂತನೆ ನಡೆಯುತ್ತಿದೆ.


ಈ ಹಿಂದೆ ವರ್ಷದಲ್ಲೊಮ್ಮೆ ಅಧಿವೇಶನ ಸಂದರ್ಭ ಹತ್ತದಿನೈದು ದಿವಸ ಮಾತ್ರ ರಾತ್ರಿಯ ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಸ್ಪೀಕರ್ ಖಾದರ್ ಅವರು ಅದರಲ್ಲಿ ಮಹತ್ತರ ಬದಲಾವಣೆಗೆ ಅಂಕಿತ ಹಾಕಿದ್ದಾರೆ. ಅಧಿವೇಶನ ನಡೆಯುವ ದಿನಗಳಲ್ಲದೇ ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ರಾಷ್ಟ್ರೀಯ ದಿನಾಚರಣೆಗಳಂದು ಬಣ್ಣಬಣ್ಣದ ವಿನ್ಯಾಸದ ಬೆಳಕಿನೊಂದಿಗೆ ಸುವರ್ಣ ಸೌಧ ಕಂಗೊಳಿಸಲು ರೂಪುರೇಷೆಯನ್ನು ತಯಾರಿಸಿದ್ದಾರೆ. ರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಬೆಳಕಿನ ವ್ಯವಸ್ಥೆ ಮಾಡುತ್ತಿರುವ ಗುತ್ತಿಗೆದಾರರಿಗೆ 10 ವರ್ಷದ ಸುವರ್ಣಸೌಧದ ಬೆಳಕಿನ ನಿರ್ವಹಣೆ ಕೊಟ್ಟಿರುವ ಸ್ಪೀಕರ್ ಡಿಸೆಂಬರ್ 4 ಅಥವಾ 5 ರಂದು ಅದನ್ನು ಉದ್ಘಾಟಿಸುವರು.
RGBW ಎಲ್ಇಡಿ ಡೈನಾಮಿಕ್ ಲೈಟ್ ನೊಂದಿಗೆ ಮುಂದೆ ಸುವರ್ಣ ಸೌಧ ಕಂಗೊಳಿಸಲಿದೆ. ಬಗೆಬಗೆಯ ವಿನ್ಯಾಸ, ಹಲವು ಬಣ್ಣಗಳಲ್ಲಿ ಕಂಪ್ಯೂಟರೀಕೃತ ಸೌಲಭ್ಯದೊಂದಿಗೆ ಸೌಧದ ಅಂದ ನೂರ್ಮಡಿಗೊಳಿಸಲಿದೆ. ವಿಶೇಷ ಅಂದರೆ ಈ ಹಿಂದೆ ಹತ್ತದಿನೈದು ದಿನ ಉರಿದ ಬೆಳಕಿನ ಅದೇ ಖರ್ಚು ವೆಚ್ಚದಲ್ಲಿ ಈ ಡಿಜಿಟಲೈಸ್ಡ್ ಲೈಟ್ಸ್ ಕೂಡಾ ವರ್ಷಪೂರ್ತಿ ಬೆಳಗಲಿದೆ. ಹೀಗೇ 10 ವರ್ಷದ ಕರಾರನ್ನು ಈ ಯೋಜನೆಗೆ ನೀಡಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರ ವಿನೂತನ ದೂರದೃಷ್ಟಿಯ ಯೋಜನೆಗೆ ಎಲ್ಲರೂ ಶಹಬ್ಬಾಸ್ ಗಿರಿ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು